ಸುದ್ದಿ ಕಣಜ.ಕಾಂ | KARNATAKA | CRIME NEWS
ಶಿವಮೊಗ್ಗ: ಹರ್ಷ ಹಿಂದೂ ಹತ್ಯೆ ಬಳಿಕ ಮುಸ್ಲಿಂ ವ್ಯಕ್ತಿಯೊಬ್ಬರ ಹೆಸರಿನಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಾಗಲಕೋಟೆ ಪೊಲೀಸರು ಇತ್ತೀಚೆಗೆ ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕದ ಸಿದ್ಧಾರೂಢ ಶ್ರೀಕಾಂತ್ (31) ಬಂಧಿತ ಆರೋಪಿ. ಈತ ಸಾಮಾಜಿಕ ಜಾಲತಾಣದಲ್ಲಿ ಫೆಬ್ರವರಿ 21ರಂದು ಪ್ರಚೋದನಕಾರಿ ಹೇಳಿಕೆಯನ್ನು ಪೋಸ್ಟ್ ಮಾಡಿದ್ದು, ಬಾಗಲಕೋಟೆ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮುಶ್ತಾಕ್ ಅಲಿ ಹೆಸರಿನಲ್ಲಿ ಫೇಕ್ ಅಕೌಂಟ್
ಶ್ರೀಕಾಂತ್ ಎಂಬಾತ ಮುಶ್ತಾಕ್ ಅಲಿ ಎಂಬಾತನ ಹೆಸರಿನಲ್ಲಿ ಫೇಸ್ಬುಕ್ ಖಾತೆಯನ್ನು ತೆರೆದು ಅದರ ಮೂಲಕ ಅರುಣ್ ಅವರಿಗೆ ಬೆದರಿಕೆಯ ಪೋಸ್ಟ್ ಹಾಕಿದ್ದನು. ಇದರ ಬಗ್ಗೆ ಅರುಣ್ ಅವರು ಶಿವಮೊಗ್ಗ ಸಿಇಎನ್ ಠಾಣೆಯಲ್ಲಿ ದೂರು ನೀಡಿದ್ದರು. ಬಾಗಲಕೋಟೆಯಲ್ಲೂ ಇದೇ ವಿಚಾರವಾಗಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿ ಆರೋಪಿಯನ್ನು ಸ್ವಂತ ಊರಿನಲ್ಲಿಯೇ ಬಂಧಿಸಿದ್ದು, ತನಿಖೆ ನಡೆಯುತ್ತಿದೆ.
ಶಿವಮೊಗ್ಗಕ್ಕೂ ಕರೆದುಕೊಂಡು ಬರುವ ಸಾಧ್ಯತೆ
ಶ್ರೀಕಾಂತ್ ಗೆ ಬಾಗಲಕೋಟೆ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅಲ್ಲಿಯ ವಿಚಾರಣೆ ಮುಗಿದ ನಂತರ ಆತನನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುವರು.