ಸುದ್ದಿ ಕಣಜ.ಕಾಂ | TALUK | CRIME NEWS
ಹೊಸನಗರ: ಮನೆಯಲ್ಲಿ ವಿಷಜಂತು ಕಚ್ಚಿ ಗೃಹಿಣಿಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ರಾಮಚಂದ್ರಾಪುರ ಗ್ರಾಮ ವ್ಯಾಪ್ತಿಯ ಚಾಮುಂಡೇಶ್ವರಿ ಬೆಟ್ಟದ ಬಳಿ ಇತ್ತೀಚೆಗೆ ನಡೆದಿದೆ.
ಸೌಮ್ಯ(24) ಮೃತರು. ಮನೆಯಲ್ಲಿ ಅಡುಗೆ ಮಾಡಲು ತೆರಳುವಾಗ ಇವರ ಕಾಲಿಗೆ ಏನೋ ಕಚ್ಚಿದ ಅನುಭವವಾಗಿದೆ. ಕೆಲಹೊತ್ತಿನ ಬಳಿಕ ನೋವು ಕಾಣಿಸಿಕೊಂಡಿದೆ. ತಕ್ಷಣ ಮನೆಯವರು ಸೇರಿ ಹೊಸನಗರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಸೌಮ್ಯ ಅವರ ವಿವಾಹವು ನಾಲ್ಕು ವರ್ಷಗಳ ಹಿಂದೆ ಆಗಿದ್ದು, ಮೂರು ವರ್ಷದ ಗುಂಡು ಮಗುವಿದೆ.