ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ಒಂದೆಡೆ ಕೆ.ಎಸ್.ಆರ್.ಟಿ.ಸಿ (KSRTC) ಬಸ್ ನಿಲ್ದಾಣದಲ್ಲಿ ಲ್ಯಾಪ್ ಟಾಪ್ ಕಳ್ಳತನದ ಸರಣಿ ಮುಂದುವರಿದಿದ್ದು, ಮತ್ತೊಂದೆಡೆ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಮೊಬೈಲ್ ಕಸಿದುಕೊಂಡು ಹೋಗುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ.
ಬೆಂಗಳೂರಿಗೆ ತೆರಳಬೇಕಿದ್ದ ವ್ಯಕ್ತಿ
ಚೇತನ್ ನಾಯ್ಕ್ ಅವರಿಂದ ಮೊಬೈಲ್ ದೋಚಲಾಗಿದೆ. ಅವರು ಗುರುವಾರ ರಾತ್ರಿ ಬೆಂಗಳೂರಿಗೆ ತೆರಳುವುದಕ್ಕಾಗಿ ಉಷಾ ನರ್ಸಿಂಗ್ ಹೋಮ್ ಕಡೆಯಿಂದ ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಮೊಬೈಲ್ ನಲ್ಲಿ ಮಾತನಾಡಿಕೊಂಡು ಬರುತ್ತಿದ್ದಾಗ ಹಿಂಬದಿಯಿಂದ ಬೈಕ್ ನಲ್ಲಿ ಬಂದ ಇಬ್ಬರು ಮೊಬೈಲ್ ದೋಚಿ ಪರಾರಿಯಾಗಿದ್ದಾರೆ. ಚೇತನ್ ನೀಡಿರುವ ದೂರಿನ ಪ್ರಕಾರ ಬೈಕ್ ನಲ್ಲಿ ಮೊಬೈಲ್ ದೋಚಿದವರು ರೈಲ್ವೆ ನಿಲ್ದಾಣದ ಕಡೆಗೆ ವೇಗವಾಗಿ ಹೋಗಿದ್ದಾರೆ. ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ.