ಸುದ್ದಿ ಕಣಜ.ಕಾಂ | DISTRICT | HEALTH NEWS
ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ರೇಬಿಸ್ ಗೆ ಇಬ್ಬರು ಬಲಿಯಾಗಿರುವುದು ಕಳವಳಕಾರಿ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹೇಳಿದರು.
ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರತಿಯೊಂದು ಸಾಕಿದ ನಾಯಿಗೆ ಲಸಿಕೆಯನ್ನು ಕಡ್ಡಾಯವಾಗಿ ಹಾಕಬೇಕು ಎಂದು ಸೂಚನೆ ನೀಡಿದರು.
READ | ಶಿವಮೊಗ್ಗ ಜಿಲ್ಲೆಯಲ್ಲಿ ‘ಹುಂಚ’ ತಂಬಾಕು ಮುಕ್ತ ಗ್ರಾಮ ಘೋಷಣೆ
ಪಶುವೈದ್ಯಕೀಯ ಇಲಾಖೆ ಈ ಕುರಿತು ಅರಿವು ಮೂಡಿಸುವ ಕೆಲಸ ಮಾಡಬೇಕು. ಬೀದಿನಾಯಿಗಳನ್ನು ನಿಯಂತ್ರಣ ಮಾಡುವ ಕುರಿತು ಸ್ಥಳೀಯ ಸಂಸ್ಥೆಗಳು ಸೂಕ್ತ ಕ್ರಮ ಜರುಗಿಸಬೇಕು. ಪ್ರತಿಯೊಂದು ಆಸ್ಪತ್ರೆಯಲ್ಲಿ ರೇಬಿಸ್ ವ್ಯಾಕ್ಸಿನ್ ಲಭ್ಯತೆಯನ್ನು ಖಾತ್ರಿಪಡಿಸಬೇಕು ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ, ಆರ್.ಸಿಎಚ್ ಅಧಿಕಾರಿ ಡಾ. ನಾಗರಾಜ್ ನಾಯಕ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.