ಸುದ್ದಿ ಕಣಜ.ಕಾಂ | DISTRICT | ROUTE CHANGE
ಶಿವಮೊಗ್ಗ: ಶಿವಮೊಗ್ಗ- ಭದ್ರಾವತಿ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.34ರಲ್ಲಿ ರೈಲ್ವೆ ಓವರ್ ಬ್ರಿಡ್ಜ್ (ROB) ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕಾಗಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗದಂತೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ಕೆಳಕಂಡ ಪರ್ಯಾಯ ಮಾರ್ಗಗಳಲ್ಲಿ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶಿಸಿದ್ದಾರೆ.
READ | ಶಿವಮೊಗ್ಗದಲ್ಲಿ ನಾಗರಿಕರಿಗೆ GUN TRAINING CAMP, ಯಾವ ತಾಲೂಕಿನವರು ಅರ್ಜಿ ಸಲ್ಲಿಸಬಹುದು
ಪರ್ಯಾಯ ಮಾರ್ಗದ ವಿವರ
ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ಸಂಚರಿಸುವ ಮಿನಿ ನಗರ ಸಾರಿಗೆ ಬಸ್ಗಳು, ಕಾರು, ಟ್ಯಾಕ್ಸಿ, ಮತ್ತು ಲಘು ವಾಹನಗಳು ಕಡದಕಟ್ಟೆ ವಿಧ್ಯಾಧಿರಾಜ ಸಭಾಭವನ ಪಕ್ಕದ ರಸ್ತೆಯಿಂದ ಹೆಬ್ಬಂಡಿ ಮಾರ್ಗವಾಗಿ ಲಕ್ಷ್ಮಿಪುರ ಹಾಗೂ ಬಿಳಿಕಿ ಕ್ರಾಸ್ ಮೂಲಕ ಸಂಚರಿಸುವುದು. ಎಲ್ಲ ರೀತಿಯ ಭಾರಿ ವಾಹನಗಳು ಉಂಬ್ಳೆಬೈಲ್ ರಸ್ತೆ ಮೂಲಕ-ಕೃಷ್ಣಪ್ಪ ವೃತ್ತ-ಸಿದ್ದಾಪುರ ಸರ್ಕಲ್ ಬಿಳಿಕಿ ಕ್ರಾಸ್ ಮುಖಾಂತರ ಸಂಚರಿಸುವಂತೆ ಆದೇಶದಲ್ಲಿ ಸೂಚಿಸಿದ್ದಾರೆ.