ಸುದ್ದಿ ಕಣಜ.ಕಾಂ | CITY | PUBLIC NOTICE
ಶಿವಮೊಗ್ಗ: ನಗರದಲ್ಲಿ ಅಗತ್ಯ ವಸ್ತುಗಳ ಕಾಯ್ದೆ 1995 ರ ನಿಯಮಗಳ ಉಲ್ಲಂಘನೆಗಾಗಿ ಆಹಾರ ಇಲಾಖೆಯು ವಶಕ್ಕೆ ಪಡೆದ ಪಡಿತರ ಅಕ್ಕಿ ದಾಸ್ತಾನನ್ನು ನಗರದ ಕೆಎಫ್ಸಿಎಸ್ಸಿ ಸಗಟು ಮಳಿಗೆ, ಎಪಿಎಂಸಿ ಆವರಣ ಇಲ್ಲಿ ಬಹಿರಂಗ ಹರಾಜು ಮಾಡಲಿದೆ.
READ | ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ, ಶಿವಮೊಗ್ಗದಲ್ಲಿ ನಡೆಯಲಿದೆ ಉದ್ಯೋಗ ಮೇಳ
ಯಾವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಷ್ಟು ಅಕ್ಕಿ ಸೀಜ್
ಕೋಟೆ ಪೊಲೀಸ್ ಠಾಣೆಯಲ್ಲಿ ದಾಖಲಾದ 2 ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆಯಲಾದ 18.12 ಕ್ವಿಂಟಾಲ್ ಮತ್ತು 143 ಕ್ವಿಂಟಾಲ್ ಅಕ್ಕಿ, ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾದ 3 ಪ್ರಕರಣಕ್ಕೆ ಸಂಬಂಧಿಸಿದಂತೆ 27.50 ಕ್ವಿಂಟಾಲ್ ಅಕ್ಕಿ, ಇನ್ನುಳಿದ ಎರಡು ಪ್ರಕರಣದಲ್ಲಿ ತಲಾ 40 ರಂತೆ ಒಟ್ಟು 80 ಕ್ವಿಂಟಾಲ್ ಅಕ್ಕಿ ಮತ್ತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ 4.86 ಕ್ವಿಂಟಾಲ್ ಅಕ್ಕಿ ಹಾಗೂ ಅನಿರೀಕ್ಷಿತ ದಾಳಿಯಲ್ಲಿ ಸಹಾಯಕ ನಿರ್ದೇಶಕರು ವಶಕ್ಕೆ ಪಡೆದ 96 ಕ್ವಿಂಟಾಲ್ ಅಕ್ಕಿ, 1 ಕ್ವಿಂಟಾಲ್ ಗೋಧಿಯನ್ನು ಮಾರ್ಚ್ 21 ರಂದು ಬೆಳಗ್ಗೆ 11.30 ಗಂಟೆಗೆ ಅನೌಪಚಾರಿಕ ಪಡಿತರ ಪ್ರದೇಶ, ಕೆಎಫ್ಸಿಎಸ್ಸಿ ಸಗಟು ಮಳಿಗೆ, ಎಪಿಎಂಸಿ ಆವರಣದಲ್ಲಿ ಸಹಾಯಕ ನಿರ್ದೇಶಕರ ಸಮಕ್ಷಮದಲ್ಲಿ ಬಹಿರಂಗ ಹರಾಜು ಮಾಡಲಾಗುವುದು.
ಹರಾಜಿನಲ್ಲಿ ಭಾಗವಹಿಸಲು ಆಸಕ್ತರಿರುವ ಬಿಡ್ಡುದಾರರು ಷರತ್ತುಗಳಿಗೆ ಒಳಪಟ್ಟು ಭದ್ರತಾ ಠೇವಣಿ ಪಾವತಿಸಿ ಗೊತ್ತುಪಡಿಸಿದ ದಿನಾಂಕದಂದು ಬೆಳಗ್ಗೆ 9.30 ರಿಂದ 10.30 ರೊಳಗೆ ಒಂದು ಗಂಟೆ ಮುಂಚಿತವಾಗಿ ಹಾಜರಿರಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.