ಸುದ್ದಿ ಕಣಜ.ಕಾಂ | DISTRICT | POLITICAL NEWS
ಶಿವಮೊಗ್ಗ: ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆಯನ್ನು ಬಗೆಹರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಶಿವಮೊಗ್ಗ ಜಿಲ್ಲೆಯೊಂದರಲ್ಲೇ 25,000 ಅರ್ಜಿಗಳು ತಿರಸ್ಕರಿಸಲಾಗಿದೆ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಆರೋಪಿಸಿದರು.
ಕಲ್ಲಹಳ್ಳಿಯಲ್ಲಿ ಶನಿವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಅರಣ್ಯ ಭೂಮಿ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆದಿದೆ. ಶಿವಮೊಗ್ಗ, ಕಾರವಾರ ಸೇರಿದಂತೆ ರಾಜ್ಯದಲ್ಲಿ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ರೈತರಿಗೆ ನೋಟಿಸ್ ನೀಡಿದ್ದು, ಕೋರ್ಟ್ ಗೆ ಅಲೆದಾಡುವಂತಾಗಿದೆ ಎಂದರು.
READ | ಜನ್ಮದಿನದಂದೇ ಶಪಥ ಮಾಡಿದ ಮಧು ಬಂಗಾರಪ್ಪ, ಹೇಳಿದ್ದೇನು?
ಸೊರಬ ತಾಲೂಕಿನಲ್ಲಿ 11 ಸಾವಿರ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ಬೇಲ್ ಪಡೆಯುವ ಸಂಕಷ್ಟದ ಸ್ಥಿತಿಯನ್ನು ಸರ್ಕಾರ ಸೃಷ್ಟಿಸಿದೆ. ಈ ಕಾನೂನು ತಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಈಗ ಸದನದಲ್ಲಿ ರೈತರಿಗೆ ಅನ್ಯಾಯ ಎಂದು ಹೇಳುತ್ತಿದ್ದಾರೆ. ಈ ಕಾನೂನು ತಿದ್ದುಪಡಿ ಮಾಡದಿದ್ದರೆ ಸರ್ಕಾರಕ್ಕೆ ಉತ್ತಮ ಹೆಸರು ಬರುವುದಿಲ್ಲ. ಅವರೇ ಮಾಡಿದ ಕಾನೂನಿನ ವಿರುದ್ಧ ಈಗ ಮಾತನಾಡಿರುವುದಕ್ಕೆ ಸ್ವಾಗತಿಸುತ್ತೇನೆ ಎಂದರು.
ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಇತಿಹಾಸ ಗೊತ್ತಿಲ್ಲ
ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಬಗರ್ ಹುಕುಂ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಅದಕ್ಕಾಗಿಯೇ ಅವರು ಕಾಂಗ್ರೆಸ್ ವಿರುದ್ಧ ಮಾತನಾಡಿದ್ದಾರೆ. 2006ರಲ್ಲಿ ಕಾಂಗ್ರೆಸ್ ಜಾರಿಗೆ ತಂದಿದ್ದ ಅರಣ್ಯ ಹಕ್ಕು ಕಾಯ್ದೆಯ ಬಗ್ಗೆ ಆಗಿನ ಸಂಸದರು ಮಾತನಾಡಿಲ್ಲ ಎಂದು ಆರೋಪಿಸಲಾಗಿದೆ. 2002ರಲ್ಲಿ ಆಗಿನ ಸಂಸದರಾಗಿದ್ದ ಎಸ್.ಬಂಗಾಪ್ಪ ಅವರು 45 ನಿಮಿಷ ಸಂಸತ್ತಿನಲ್ಲಿ ಮಾತನಾಡಿದ್ದರು. ಅನಧಿಕೃತ ಸಾಗುವಳಿದಾರರ ಬಗ್ಗೆ ಮಾತನಾಡಿದ್ದಾರೆ. ಅರಣ್ಯ ಹಕ್ಕು ಕಾಯಿದೆ ಜಾರಿಗೆ ತಂದಿದ್ದೇ ಕಾಂಗ್ರೆಸ್ ಸರ್ಕಾರ, ಇದರಿಂದ ಪರಿಶಿಷ್ಟ ಪಂಗಡ ಹಾಗೂ ಗುಡ್ಡಗಾಡು ಪ್ರದೇಶದ ಜನರಿಗೆ ಉಳುವ ಭೂಮಿಗೆ ಹಕ್ಕುಪತ್ರ ಸಿಕ್ಕಿದೆ ಎಂದು ಹೇಳಿದರು.
ಬಿಜೆಪಿ ಭರವಸೆ ಮರೆತಿದ್ದು ಏಕೆ?
ಕಾಯ್ದೆಯಲ್ಲಿ 75 ವರ್ಷ ದಾಖಲೆ ಬೇಕು ಎಂಬ ಷರತ್ತು ಇರುವುದು ಮಲೆನಾಡಿನ ಭಾಗದ ಜನರಿಗೆ ತೊಂದರೆಯಾಗಿರುವುದು ನಿಜ. ಆದರೆ ಅದನ್ನು ಸರಿಮಾಡುತ್ತೇವೆ ಎಂದು ಚುನಾಯಿತರಾದ ಬಿಜೆಪಿ ಸರಕಾರ ಏಕೆ ಮಾಡಿಲ್ಲ, ಸಂಸದರು ಈ ಬಗ್ಗೆ ಸಂಸತ್ತಿನಲ್ಲಿ ಏಕೆ ಮಾತನಾಡಿಲ್ಲ ಎಂದು ಪ್ರಶ್ನಿಸಿದದರು.
READ | ಅದ್ಧೂರಿಯಾಗಿ ಜರುಗಿದ ಚಂದ್ರಗುತ್ತಿ ಜಾತ್ರೆ, ಸಾವಿರಾರು ಜನ ಭಕ್ತರ ಸಮ್ಮುಖದಲ್ಲಿ ಬ್ರಹ್ಮ ರಥೋತ್ಸವ
ನಾಳೆ ಆನವಟ್ಟಿಯಲ್ಲಿ ಬೃಹತ್ ಪ್ರತಿಭಟನೆ
ವಿದ್ಯುತ್ ಅಸರ್ಮಪಕ ಪೂರೈಕೆ ಹಾಗೂ ಬಗರ್ಹುಕುಂ ರೈತರ ಸಮಸ್ಯೆ ಮುಂದಿಟ್ಟುಕೊಂಡು ಮಾರ್ಚ್ 14 ರಂದು ಆನವಟ್ಟಿಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಎಲ್ಲ ತಾಲೂಕುಗಳಲ್ಲಿಯೂ ಈ ರೀತಿಯ ಪ್ರತಿಭಟನೆಯನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದಲ್ಲಿಯೂ ಒಂದು ದೊಡ್ಡ ಮಟ್ಟದ ಪ್ರತಿಭಟನೆ ಮಾಡಿ ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರನ್ನು ಕರೆಸಲಾಗುವುದು ಎಂದರು.
ಮಾಧ್ಯಮಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಪ್ರಸನ್ನಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಪ್ರಮುಖರಾದ ಜಿ.ಡಿ.ಮಂಜುನಾಥ್, ಡಾ.ಶ್ರೀನಿವಾಸ್ ಕರಿಯಣ್ಣ, ಕಲಗೋಡು ರತ್ನಾಕರ್, ಯು.ಶಿವಾನಂದ್, ಆರ್.ಸಿ.ಪಾಟೀಲ್, ಹುಲಿಕೊಪ್ಪ ಶ್ರೀಧರ್, ಪ್ರವೀಣ್, ವೈ.ಎಚ್.ನಾಗರಾಜ್ ಉಪಸ್ಥಿತರಿದ್ದರು.
https://www.suddikanaja.com/2021/03/02/madu-bandarappa-said-about-joining-congress/