ಸುದ್ದಿ ಕಣಜ.ಕಾಂ | DISTRICT | HIJAB CONTROVERSY
ಶಿವಮೊಗ್ಗ: ಹಿಜಾಬ್ ಕುರಿತಂತೆ ಕರ್ನಾಟಕ ಉಚ್ಚ ನ್ಯಾಯಾಲಯವು ಮಾರ್ಚ್ 15ರಂದು ತೀರ್ಪು ಪ್ರಕಟಿಸಲಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ.
RELATED NEWS
- ಮಾ.15ರಂದು ಶಾಲಾ, ಕಾಲೇಜಿಗೆ ರಜೆ, ಏನೇನು ನಿರ್ಬಂಧ ಇರಲಿವೆ, ಆದೇಶದಲ್ಲಿ ಏನಿದೆ?
- ಶಿವಮೊಗ್ಗ ಜಿಲ್ಲೆಯಾದ್ಯಂತ 144 ನಿಷೇಧಾಜ್ಞೆ ಜಾರಿ, ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾಧಿಕಾರಿ ಮನವಿ
- ನಿಷೇಧಾಜ್ಞೆ ಹಿನ್ನೆಲೆ ಮಾ.14ರಂದು ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ
ಜಿಲ್ಲೆಯು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಮುನ್ನೆಚ್ಚರಿಕೆ ಉದ್ದೇಶದಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಕರ್ತವ್ಯಕ್ಕೆ 8 ಕೆ.ಎಸ್.ಆರ್.ಪಿ. ತುಕಡಿಗಳು, 8 ಡಿಎಆರ್ ತುಕಡಿಗಳು, 1 ಆರ್.ಎ.ಎಫ್. ತುಕಡಿ ಮತ್ತು ಶಿವಮೊಗ್ಗ ಜಿಲ್ಲೆಯ ಪೆÇಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.