ಸುದ್ದಿ ಕಣಜ.ಕಾಂ | TALUK | CRIME NEWS
ತೀರ್ಥಹಳ್ಳಿ: ತಾಲೂಕಿನ ಆಗುಂಬೆ ವ್ಯಾಪ್ತಿಯ ಹೊಸೂರು ಗ್ರಾಮದಲ್ಲಿ ಕಾಡುಕೋಣ(Indian gaur)ವೊಂದು ತಿವಿದ ಪರಿಣಾಮ ರೈತ ಗಾಯಗೊಂಡಿದ್ದಾನೆ.
ಅಸಿಮನೆ ರಾಘವೇಂದ್ರ ಎಂಬ ರೈತ ಗಾಯಗೊಂಡಿದ್ದಾನೆ. ಅಡಕೆ ತೋಟಕ್ಕೆ ನುಗ್ಗಿದ್ದ ಕಾಡುಕೋಣ ಓಡಿಸಲು ಹೋದಾಗ ಘಟನೆ ನಡೆದಿದೆ.
ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ರಾಘವೇಂದ್ರ ತಮ್ಮ ಮನೆ ಮುಂದಿರುವ ಅಡಿಕೆ ತೋಟಕ್ಕೆ ಬಂದಿದ್ದು ಕಾಡುಕೋಣವನ್ನು ಓಡಿಸಲು ಪತ್ನಿ ಜೊತೆ ಹೋಗಿದ್ದರು. ಆಗ ಕಾಡುಕೋಣ ರಾಘವೇಂದ್ರ ಅವರ ಮೇಲೆ ದಾಳಿ ನಡೆಸಿ ಕೊಂಬಿನಿಂದ ತಿವಿದಿದೆ.
READ | ಹರಿಹರಪುರ ಶ್ರೀಮಠದಲ್ಲಿ ಐತಿಹಾಸಿಕ ಮಹಾ ಕುಂಭಾಭಿಷೇಕ, ಆಗಮಿಸಲಿದ್ದಾರೆ ಸಿಎಂ ಬೊಮ್ಮಾಯಿ
ಹೊಟ್ಟೆಗೆ ಗಂಭೀರ ಗಾಯ
ರಾಘವೇಂದ್ರ ಅವರ ಹೊಟ್ಟೆಯ ಭಾಗದಲ್ಲಿ ತೀವ್ರ ಗಾಯವಾಗಿರುವುದು ತಿಳಿದುಬಂದಿದೆ. ಪತಿ ರಾಘವೇಂದ್ರನ ಮೇಲೆ ಕಾಡುಕೋಣ ದಾಳಿಯನ್ನು ಕಂಡ ಪತ್ನಿಯು ಅಲ್ಲಿಯೇ ಪ್ರಜ್ಞೆ ತಪ್ಪಿದ್ದಾರೆ. ಈ ಬಗ್ಗೆ ಮಾಹಿತಿ ಲಭ್ಯವಾಗಿದ್ದೇ ಸ್ಥಳಕ್ಕೆ ಆಗಮಿಸಿದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಸಿರುಮನೆ ನಂದನ್ ಅವರು ರೈತನನ್ನು ತಮ್ಮ ಕಾರಿನಲ್ಲಿ ಮುಖ್ಯರಸ್ತೆಗೆ ಕರೆತಂದಿದ್ದಾರೆ. ಬಳಿಕ 108 ವಾಹನಕ್ಕೆ ಕರೆ ಮಾಡಿ ಮಣಿಪಾಲ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೇಗರವಳ್ಳಿ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.