ಸುದ್ದಿ ಕಣಜ.ಕಾಂ | DISTRICT | TUNGA DAM
ಶಿವಮೊಗ್ಗ: ತುಂಗಾ ಮೇಲ್ದಂಡೆ ಯೋಜನೆ ಡ್ಯಾಂ ಪೂರ್ಣ ಮಟ್ಟಕ್ಕೆ ನೀರು ಸಂಗ್ರಹವಾಗಿದ್ದು, ಮುಂಗಾರು ಪ್ರಾರಂಭವಾಗಿ ಜಲಾನಯನ ಪ್ರದೇಶದಲ್ಲಿ ಮಳೆಯಾದರೆ ಹೆಚ್ಚಿನ ಪ್ರಮಾಣದ ಒಳಹರಿವು ಬಂದಲ್ಲಿ ಯಾವ ಕ್ಷಣದಲ್ಲಾದರೂ ನದಿಗೆ ನೀರನ್ನು ಬಿಡುವ ಸಂಭವವಿದೆ ಎಂದು ತುಂಗಾ ಮೇಲ್ದಂಡೆ ಯೋಜನೆ ವಿಭಾಗದ ಕನೀನಿನಿ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಂಗಾ ನದಿಯ ಪಾತ್ರದಲ್ಲಿ ಬರುವ ಗ್ರಾಮಗಳ ಪ್ರದೇಶದ ಗ್ರಾಮಸ್ಥರು ನದಿ ಪಾತ್ರದಲ್ಲಿ ಹಾಗೂ ತಗ್ಗು ಪ್ರದೇಶಗಳಲ್ಲಿ ಯಾವುದೇ ಚಟುವಟಿಕೆಗಳನ್ನು ಮಾಡಬಾರದು ಹಾಗೂ ದನಕರುಗಳನ್ನು, ಪ್ರಾಣಿಗಳನ್ನು ಮೇಯಲು ಬಿಡುವುದು ಮಾಡದೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮುನ್ನೆಚ್ಚರಿಕೆ ವಹಿಸಲು ತಿಳಿಸಿದ್ದಾರೆ.