ಸುದ್ದಿ ಕಣಜ.ಕಾಂ | DISTRICT | POLITICAL NEWS
ಶಿವಮೊಗ್ಗ: ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬಿ.ಎಸ್.ವೈ. ಪ್ರವಾಸದ ವಿವರ
ಏಪ್ರಿಲ್ 29ರಂದು ಮಧ್ಯಾಹ್ನ 2.45 ಗಂಟೆಗೆ ಶಿವಮೊಗ್ಗ ಹೆಲಿಪ್ಯಾಡ್ ಗೆ ಆಗಮಿಸುವರು. ಅಂದು ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಶಿವಮೊಗ್ಗದಲ್ಲಿಯೇ ವಾಸ್ತವ್ಯವಿರಲಿದ್ದಾರೆ.
30ರಂದು ಬೆಳಗ್ಗೆ 10.30ಕ್ಕೆ ಚಂದ್ರಗಿರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 5ಕ್ಕೆ ಶಿವಮೊಗ್ಗದಿಂದ ರಸ್ತೆ ಮೂಲಕ ಶಿಕಾರಿಪುರಕ್ಕೆ ತೆರಳುವರು.
READ | ಭದ್ರಾವತಿಯ ವಿಐಎಸ್ಎಲ್, ಎಂಪಿಎಂ ಪುನಶ್ಚೇತನದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು?
ಮೇ 1ರಂದು ಬೆಳಗ್ಗೆ 10.30ಕ್ಕೆ ಶಿಕಾರಿಪುರ ತಾಲೂಕಿನ ಉಡುಗಣಿಯ ಶ್ರೀ ಚನ್ನಕೇಶವ ದೇವರು, ಶ್ರೀಮುಖ್ಯ ಪ್ರಾಣದೇವರು ಹಾಗೂ ಶ್ರೀ ರಾಘವೇಂದ್ರಸ್ವಾಮಿ ಗುರುಸಾರ್ವಭೌಮರ ದ್ವಿತೀಯ ಮೃತ್ತಿಕಾ ಬೃಂದಾವನ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಅಂದು ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು.
ಮೇ 2ರಂದು ಬೆಳಗ್ಗೆ 11ಕ್ಕೆ ಶಿಕಾರಿಪುರದ 250 ಹಾಸಿಗೆ ಸಾಮಥ್ರ್ಯದ ಸಾರ್ವಜನಿಕ ಆಸ್ಪತ್ರೆ ಕಟ್ಟಡ ಹಾಗೂ ಶಿರಾಳಕೊಪ್ಪದ 50 ಹಾಸಿಗೆ ಸಾಮಥ್ರ್ಯದ ಸಾರ್ವಜನಿಕ ಆಸ್ಪತ್ರೆ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4 ಗಂಟೆಗೆ ಶಿವಮೊಗ್ಗದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವಿವಿಧ ಉದ್ಘಾಟನಾ ಕಾರ್ಯಕ್ರಗಳಲ್ಲಿ ಪಾಲ್ಗೊಂಡು ಅಂದು ಶಿವಮೊಗ್ಗದಲ್ಲೇ ವಾಸ್ತವ್ಯ ಹೂಡುವರು.