ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ನಗರದ 60 ಅಡಿ ರಸ್ತೆಯಲ್ಲಿರುವ ಚಾಲುಕ್ಯ ಬಾರ್ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಓಸಿ ಮಟ್ಕಾ ಜೂಜಾಟ ಆಡುತ್ತಿದ್ದ ಗ್ಯಾಂಗ್ ಮೇಲೆ ಪೊಲೀಸರು ಗುರುವಾರ ದಾಳಿ ನಡೆಸಿ, ಒಬ್ಬನನ್ನು ಬಂಧಿಸಿದ್ದು, ಇನ್ನಿಬ್ಬರು ಪರಾರಿಯಾಗಿದ್ದಾರೆ.
ವಿನೋಬನಗರ ನಿವಾಸಿ ಹರೀಶ್ (29) ಎಂಬಾತನನ್ನು ಬಂಧಿಸಲಾಗಿದೆ. ರಮೇಶ್ ಮತ್ತು ವಿಶ್ವನಾಥ್ ಪರಾರಿಯಾದವರೆಂದು ವಿಚಾರಣೆ ತಿಳಿದುಬಂದಿದೆ.
READ | ಶಾಲಾ ಆವರಣದಲ್ಲಿ ನಿಲ್ಲಿಸಿದ್ದ ಬಸ್ಗಳ ಬ್ಯಾಟರಿ ಮಾಯ!
ಖಚಿತ ಮಾಹಿತಿ ಮೇರೆಗೆ ವಿನೋಬನಗರ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳು ಓಸಿ ಮಟ್ಕಾ ಆಡುತ್ತಿರುವುದು ಗಮನಕ್ಕೆ ಬಂದಿದೆ. ತಕ್ಷಣ ದಾಳಿ ನಡೆಸಿದ್ದು, ಇಬ್ಬರು ಪರಾರಿಯಾಗಿದ್ದಾರೆ. ಆರೋಪಿ ಬಳಿಯಿಂದ 3,130 ರೂಪಾಯಿ ನಗದು ವಶಕ್ಕೆ ಪಡೆಯಲಾಗಿದೆ. ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.