ಸುದ್ದಿ ಕಣಜ.ಕಾಂ | TALUK | WILD LIFE
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಒಳಗೆ ಪ್ರವೇಶಿಸಿ ಗಾಬರಿಗೆ ಮೂಡಿಸಿದ್ದ ಎರಡು ಕಾಡಾನೆಗಳು ವಾಪಸ್ ಕಾಡು ಪ್ರವೇಶಿಸಿವೆ. ಆದರೆ, ವಿವಿ ಆವರಣದಲ್ಲಿ ಯಾವುದೇ ರೀತಿಯ ದಾಂಧಲೆ ಮಾಡಿಲ್ಲ.
ಭಾನುವಾರ ರಾತ್ರಿ ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಆವರಣದಲ್ಲಿ ಎರಡು ಆನೆಗಳು ಕಾಣಿಸಿಕೊಂಡಿದ್ದರಿಂದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದ ಆತಂಕಕ್ಕೆ ಒಳಗಾಗಿದ್ದರು.
ಸಂಜೆ ಆರು ಗಂಟೆ ವೇಳೆಗೆ ಸಿಬ್ಬಂದಿ ಕ್ವಾರ್ಟರ್ಸ್ ಬಳಿ ಕಾಣಿಸಿಕೊಂಡ ಆನೆಗಳು ಸಂಜೆ 7.30ರ ಹೊತ್ತಿಗೆ ಕುವೆಂಪು ಪ್ರತಿಮೆ, ಗ್ರಂಥಾಲಯದ ಮುಂದೆ ನಡೆದಾಡಿದ್ದವು.
READ | ಕುವೆಂಪು ವಿವಿಯಲ್ಲಿ ಎರಡು ಕಾಡಾನೆ ಪ್ರತ್ಯಕ್ಷ, ಆತಂಕದಲ್ಲಿ ವಿದ್ಯಾರ್ಥಿಗಳು, ಸಿಬ್ಬಂದಿ, ಮಹತ್ವದ ಸೂಚನೆ
ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ದೌಡು
ವಿವಿ ಕ್ಯಾಂಪಸ್ ನಲ್ಲಿ ಕಾಡಾನೆ ನುಗ್ಗಿದ ವಿಚಾರ ತಿಳಿಸುತಿದ್ದಂತೆಯೇ ಅರಣ್ಯ ಇಲಾಖೆ ಸಿಬ್ಬಂದಿ ಮೊಕ್ಕಾಂ ಹೂಡಿದ್ದರು. ರಾತ್ರಿ ಇಡೀ ಆನೆಗಳ ಚಲನವಲನದ ಮೇಲೆ ನಿಗಾ ಇಟ್ಟಿದ್ದರು. ಆನೆಗಳು ಬೆಳಗಿನ ಜಾವ ವಿವಿ ಹಿಂಭಾಗದ ಕಾಂಪೌಂಡ್ ಒಡೆದು ಶಾಂತಿನಗರ ಮಾರ್ಗವಾಗಿ ಭದ್ರಾ ಅಭಯಾರಣ್ಯ ಪ್ರವೇಶಿಸಿವೆ ಎಂದು ಮೂಲಗಳು ತಿಳಿಸಿವೆ.
ಸಿಬ್ಬಂದಿ, ವಿದ್ಯಾರ್ಥಿಗಳು ಸಂಜೆ 5 ಗಂಟೆಯ ನಂತರ ಹೊರಗಡೆ ಬರದಂತೆ ಕಟ್ಟುನಿಟ್ಟಿನ ಸೂಚನೆ ಕೂಡ ನೀಡಲಾಗಿತ್ತು.