ಸುದ್ದಿ ಕಣಜ.ಕಾಂ | CITY | PROTECT
ಶಿವಮೊಗ್ಗ: ನ್ಯೂ ಮಂಡ್ಲಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಡಾ.ಬಿ.ಆರ್.ಅಂಬೇಡ್ಕರ್ ನ್ಯೂ ಮಂಡ್ಲಿ ನಾಗರಿಕರ ಹಿತರಕ್ಷಣ ಸಮಿತಿ ನೇತೃತ್ವದಲ್ಲಿ ಮಂಗಳವಾರ ಬೀದಿಗಿಳಿದು ಪ್ರತಿಭಟನೆ ನಡೆಸಿದರು.
READ | ಶಿವಮೊಗ್ಗದಲ್ಲಿ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷರ ಪ್ರಮುಖ ಸಭೆ, ನೀಡಿದ ಸೂಚನೆಗಳೇನು?
ಶಾಲಾ ವಿದ್ಯಾರ್ಥಿಗಳ ಬೇಡಿಕೆಗಳೇನು?
- ನ್ಯೂ ಮಂಡ್ಲಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ಕುಸಿದಿದ್ದರೂ ರಿಪೇರಿ ಮಾಡಿಲ್ಲ. ಕೂಡಲೇ ಕಟ್ಟಡ ರಿಪೇರಿ ಮಾಡಬೇಕು.
- ಮಳೆಗಾಲ ಆರಂಭವಾಗಲಿದ್ದು, ಶಾಲೆ ಆವರಣದಲ್ಲಿ ನೀರು ಶೇಖರಣೆಯಾಗುತ್ತಿದೆ. ಕಟ್ಟಡದೊಳಗೆ ಕುಳಿತುಕೊಳ್ಳುವುದಕ್ಕೂ ಭಯವಾಗುತ್ತಿದೆ. ಆದ್ದರಿಂದ ಅಗತ್ಯ ಕ್ರಮಕೈಗೊಳ್ಳಿ.
- ಕೂಡಲೇ ಹಳೆಯ ಶಾಲಾ ಕಟ್ಟಡವನ್ನು ಕೆಡವಿ ಹೊಸ ಕಟ್ಟಡ ನಿರ್ಮಾಣ ಮಾಡಬೇಕು. ಅಲ್ಲಿಯವರೆಗೆ ಪ್ರತಿಭಟನೆ ಕೈಬಿಡುವುದಿಲ್ಲ.
ಸಾರ್ವಜನಿಕರು, ಪೋಷಕರು, ವಿದ್ಯಾರ್ಥಿಗಳು ಹಾಗೂ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.