ಸುದ್ದಿ ಕಣಜ.ಕಾಂ | TALUK | CRIME NEWS
ಶಿವಮೊಗ್ಗ: ಯಾವುದೇ ಪರವಾನಗಿ ಇಲ್ಲದೇ ಅಕ್ರಮವಾಗಿ ನಾಡ ಬಂದೂಕುಗಳನ್ನು ಇಟ್ಟುಕೊಂಡು ದುರಸ್ತಿ ಮಾಡಿಕೊಡುತ್ತಿದ್ದ ಎನ್ನಲಾದ ವ್ಯಕ್ತಿಯೊಬ್ಬನನ್ನು ಬಂಧಿಸಿ, ಆತನಿಂದ 9 ಬಂದೂಕುಗಳನ್ನು ವಶಕ್ಕೆ ಪಡೆಯಲಾಗಿದೆ.
READ | ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್
ಆಯುಧ ಕಾಯ್ದೆ ಅಡಿ ಕೇಸ್
ಶಂಕರಘಟ್ಟದ ಪಾಲಾಕ್ಷಪ್ಪ(47) ಬಂಧಿತ. ಈತ ಮನೆಯಲ್ಲಿ ಯಾವುದೇ ಪರವಾನಗಿ ಇಲ್ಲದ ಹಳೆಯ ನಾಡ ಬಂದೂಕುಗಳನ್ನು ಅಕ್ರವಾಗಿ ಇಟ್ಟುಕೊಂಡು ದುರಸ್ತಿ ಮಾಡಿಕೊಡುತ್ತಿದ್ದಾನೆಂದು ಬಂದ ಖಚಿತ ಮಾಹಿತಿಯ ಮೇರೆಗೆ ಭದ್ರಾವತಿ ಗ್ರಾಮಾಂತರ ಠಾಣೆ ಪಿಐ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ಆರೋಪಿ ವಿರುದ್ಧ ಆಯುಧ ಕಾಯ್ದೆ 3, 25(ಎ) ಅನ್ವಯ ಪ್ರಕರಣ ದಾಖಲಿಸಲಾಗಿದೆ.