ಸುದ್ದಿ ಕಣಜ.ಕಾಂ | TALUK | CRIME NEWS
ತೀರ್ಥಹಳ್ಳಿ: ತಾಲೂಕಿನ ಆಗುಂಬೆಯ ಕಾಡಿನಲ್ಲಿ ಚನ್ನಗಿರಿ ಮೂಲದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚನ್ನಗಿರಿ ತಾಲೂಕಿನ ಕಾಗತ್ತೂರು ಗ್ರಾಮದ ಎಂ.ಕೆ.ಸ್ವಾಮಿ(27) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.
READ | ಬೈಕ್ ಅಡ್ಡಗಟ್ಟಿ ಫೋನ್ ಪೋ ಮೂಲಕ ಹಣ ದರೋಡೆ!
24ರಿಂದ ನಾಪತ್ತೆಯಾಗಿದ್ದ ಸ್ವಾಮಿ
ಮೇ 24ರಿಂದ ನಾಪತ್ತೆಯಾಗಿದ್ದು, ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ಸಹ ನೀಡಲಾಗಿತ್ತು. ಮೊಬೈಲ್ ನೆಟ್ವರ್ಕ್ ಆಧಾರದ ಮೇಲೆ ಇವರನ್ನು ಪತ್ತೆ ಹಚ್ಚಲಾಗಿದ್ದು, ತೆರಳಿ ನೋಡಲಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸ್ವಾಮಿ ಅವಿವಾಹಿತನಾಗಿದ್ದು ಶವದ ಬಳಿ ದೊರತಿರುವ ಪತ್ರದಲ್ಲಿ ತಂದೆ ಮತ್ತು ಅಣ್ಣನಿಗೆ ಕ್ಷಮಿಸುವಂತೆ ಕೋರಿದ್ದಾನೆ.