ಪತ್ರಿಕೋದ್ಯಮ ಪಾಸ್ ಆದವರಿಗೆ ಸುವರ್ಣ ಅವಕಾಶ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

IMG 20220517 232257 102

 

 

ಸುದ್ದಿ ಕಣಜ.ಕಾಂ | KARNATAKA | JOB JUNCTION
ಶಿವಮೊಗ್ಗ: ಆಕಾಶವಾಣಿ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು ಶಿವಮೊಗ್ಗ, ಹಾಸನ, ವಿಜಯನಗರ, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳಿಗೆ ಅರೆಕಾಲಿಕ ವರದಿಗಾರರನ್ನು ನೇಮಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

READ | ಮಳೆ ಹಾನಿ ಬಗ್ಗೆ ಶಿವಮೊಗ್ಗದಲ್ಲಿ ನಡೀತು ಪ್ರಮುಖ ಸಭೆ, ಸೆಲ್ವಕುಮಾರ್ ನೀಡಿದ ಖಡಕ್ ಸೂಚನೆಗಳೇನು?

ಯಾರೆಲ್ಲ‌ ಅರ್ಜಿ ಸಲ್ಲಿಸಬಹುದು?
ಅಭ್ಯರ್ಥಿಯು ಪಿ.ಜಿ ಡಿಪ್ಲೊಮಾ/ ಪತ್ರಿಕೋದ್ಯಮ/ ಸಮೂಹ ಮಾಧ್ಯಮದಲ್ಲಿ ಪದವಿ ಹೊಂದಿದ್ದು, 24 ರಿಂದ 45 ವಯೋಮಿತಿಯಲ್ಲಿರಬೇಕು. ಕನಿಷ್ಠ 2 ವರ್ಷಗಳ ಮಾಧ್ಯಮ ಅನುಭವ ಇರಬೇಕು. ಜಿಲ್ಲಾ ಮುಖ್ಯ ಕೇಂದ್ರದಲ್ಲಿ ಅಥವಾ ಜಿಲ್ಲೆಯ ಜಿಲ್ಲಾ ಮುಖ್ಯ ಕೇಂದ್ರ/ ಪುರಸಭೆ ವ್ಯಾಪ್ತಿಯ 10 ಕಿ.ಮೀ ಆಸುಪಾಸಿನ ಪ್ರದೇಶದಲ್ಲಿ ನೆಲೆಸಿರಬೇಕು.
ಅಭ್ಯರ್ಥಿಗೆ ಕಂಪ್ಯೂಟರ್ ಮತ್ತು ವರ್ಡ್ ಪ್ರಾಸೆಸಿಂಗ್ ಬಗ್ಗೆ ತಿಳಿವಳಿಕೆ ಇರಬೇಕು. ಸುದ್ದಿ ಸಂಗ್ರಹ ಉಪಕರಣಗಳನ್ನು ಹೊಂದಿರಬೇಕು. ವಿದ್ಯುನ್ಮಾನ ಮಾಧ್ಯಮಕ್ಕೆ ವರದಿಗಾರಿಕೆಯಲ್ಲಿ ಅನುಭವವಿರಬೇಕು. ಬೆಂಗಳೂರಿನಲ್ಲಿ ನೆಲೆಸಿರುವವರಿಗೆ ಆದ್ಯತೆ ನೀಡಲಾಗುವುದು.
ಅಭ್ಯರ್ಥಿಯ ಪೂರ್ಣ ವಿವರಗಳು, ಅಗತ್ಯ ದಾಖಲಾತಿಗಳ ಪ್ರತಿಗಳು ಹಾಗೂ ಅರ್ಜಿ ಶುಲ್ಕದ ಬ್ಯಾಂಕ್ ಡ್ರಾಫ್ಟ್ ಅನ್ನು ಒಳಗೊಂಡ ಅರ್ಜಿಗಳನ್ನು ರಿಜಿಸ್ಟರ್ಡ್ ಅಂಚೆ ಮೂಲಕ ಖುದ್ದಾಗಿ ಜೂನ್ 10 ರೊಳಗೆ ತಲುಪುವಂತೆ ದಿ ಡೆಪ್ಯುಟಿ ಜನರಲ್, (ಇ) & ಎಚ್‍ಓಓ, Attn: ರೀಜನಲ್ ನ್ಯೂಸ್ ಯುನಿಟ್, ಆಲ್ ಇಂಡಿಯಾ ರೇಡಿಯೋ, ರಾಜ್‍ಭವನ್ ರಸ್ತೆ, ಬೆಂಗಳೂರು 560001 ವಿಳಾಸಕ್ಕೆ ಕಳುಹಿಸಿಕೊಡಬೇಕು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 8317466729/ 9448159726/ 9482169168/ 080-22356344/ 22373000 ಅನ್ನು ಸಂಪರ್ಕಿಸಬಹುದೆಂದು ಪ್ರಸಾರ ಭಾರತಿ (prasar bharati) ಪ್ರಕಟಣೆ ತಿಳಿಸಿದೆ.

https://suddikanaja.com/2022/05/17/ks-eshwarappa-furious-reaction-on-temple-construction/

Leave a Reply

Your email address will not be published. Required fields are marked *

error: Content is protected !!