ಸುದ್ದಿ ಕಣಜ.ಕಾಂ | DISTRICT | JOB JUNCTION
ಶಿವಮೊಗ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವ ಸ್ಪಂದನ ಕೇಂದ್ರದಲ್ಲಿ ಯುವ ಪರಿವರ್ತಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಯುವ ನೀತಿ– 2012ರ ಅನ್ವಯ ರಾಜ್ಯ ಸರ್ಕಾರ ಮತ್ತು ಜನ ಆರೋಗ್ಯ ಕೇಂದ್ರ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಯುವ ಸ್ಪಂದನ ಕಾರ್ಯಕ್ರಮವು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅನುಷ್ಠಾನಗೊಂಡಿದ್ದು, ಈ ಯೋಜನೆ ಮೂಲಕ ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಯುವ ಪರಿವರ್ತಕರ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
READ | ಶಿವಮೊಗ್ಗದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಎಲ್ಲೆಲ್ಲಿ ಹುದ್ದೆಗಳ ನೇಮಕಾತಿ?
ಹೊಸನಗರ ಮತ್ತು ಸೊರಬ ತಾಲ್ಲೂಕುಗಳಲ್ಲಿ ಯುವ ಪರಿವರ್ತಕರಾಗಿ ಕಾರ್ಯ ನಿರ್ವಹಿಸಲು ಯುವಕ ಮತ್ತು ಯುವತಿಯರು ಯಾವುದೇ ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರಬೇಕು. ಕನಿಷ್ಠ 21 ರಿಂದ 35 ವಯಸ್ಸಿನೊಳಗಿದ್ದು ಕನ್ನಡ ಸ್ಪಷ್ಟವಾಗಿ ಮಾತನಾಡಲು, ಬರೆಯಲು ಬರಬೇಕು ಹಾಗೂ ಸಂವಹನ ಕೌಶಲ ಹೊಂದಿರಬೇಕು. ಸಮುದಾಯದಲ್ಲಿ ಕೆಲಸ ಮಾಡಿದವರಿಗೆ ಹಾಗೂ ಹೊಸನಗರ ಮತ್ತು ಸೊರಬ ತಾಲೂಕಿನ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳನ್ನು ಜೂನ್ 10 ರೊಳಗೆ ಖುದ್ದಾಗಿ ನೆಹರೂ ಕ್ರೀಡಾಂಗಣದಲ್ಲಿರುವ ಯುವ ಸ್ಪಂದನ ಕೇಂದ್ರಕ್ಕೆ ಸಲ್ಲಸಬಹುದು ಅಥವಾ ಕೆಳಕಂಡ ಮೊಬೈಲ್ ಸಂಖ್ಯೆಗಳಿಗೆ ವಾಟ್ಸಾಪ್ ಮೂಲಕ ಸಲ್ಲಿಸಬೇಕಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08182-222248 ಯುವ ಸಮಾಲೋಚಕಿ ಪವಿತ್ರ ಆರ್ ಮೊ.ಸಂ: 9353180519, ಕ್ಷೇತ್ರ ಸಂಪರ್ಕಾಧಿಕಾರಿ ನಾಗರತ್ನ 8088488688 ಅನ್ನು ಸಂಪರ್ಕಿಸಬಹುದು.
https://suddikanaja.com/2021/09/08/youths-helped-a-person-in-shivamogga/