ಸುದ್ದಿ ಕಣಜ.ಕಾಂ | CITY | SAMVADA
ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಎನ್.ಟಿ.ರಸ್ತೆ ಬಳಿ ನಿರ್ಮಿಸಲಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ನೂತನ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿದ ಶಾಸಕ ಕೆ.ಎಸ್.ಈಶ್ವರಪ್ಪ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಕಟ್ಟಡ ಹೊಸದಾಗಿದ್ದಾಗ ಸುಂದರವಾಗಿರುತ್ತದೆ. ಅದರ ನಿರ್ವಹಣೆ ಕೇವಲ ಇಲಾಖೆ ಅಥವಾ ಪಾಲಿಕೆಗೆ ಸೇರಿಲ್ಲ. ಬದಲಾಗಿ ವಿದ್ಯಾರ್ಥಿಗಳು ಕೂಡ ತಮ್ಮ ಕೊಠಡಿ, ವಿದ್ಯಾರ್ಥಿ ನಿಲಯವನ್ನು ಸ್ವಚ್ಚವಾಗಿ, ಇಟ್ಟುಕೊಳ್ಳಬೇಕು.
ಸುನೀತಾ ಅಣ್ಣಪ್ಪ, ಮಹಾನಗರ ಪಾಲಿಕೆ
ವಿದ್ಯಾರ್ಥಿಗಳ ಅಹವಾಲುಗಳೇನು?
ವಿದ್ಯಾರ್ಥಿ ಮುರಳೀಧರ್ ಮಾತನಾಡಿ, ಹಾಸ್ಟೆಲ್ ಶುಚಿತ್ವ, ನಿರ್ವಹಣೆ ಆಹಾರದ ರುಚಿ ಉತ್ತಮಗೊಳ್ಳಬೇಕು ಎಂದು ದೂರು ನೀಡಿದರೆ, ವಿದ್ಯಾರ್ಥಿ ಪುನೀತ್, ಶುದ್ದ ಕುಡಿಯುವ ನೀರು ಮತ್ತು ಕಸ ವಿಲೇವಾರಿಗೆ ಅವಕಾಶ ಮಾಡಿಕೊಡಬೇಕೆಂದು ಕೋರಿದರು. ಇನ್ನೋರ್ವ ವಿದ್ಯಾರ್ಥಿ ಉನ್ನತ ಅಧಿಕಾರಿಗಳು ದಿಢೀರ್ ಭೇಟಿ ನೀಡಿ, ಹಾಸ್ಟೆಲ್ ವ್ಯವಸ್ಥೆ ಗಮನಿಸಬೇಕು ಹಾಗೂ ಹಾಸ್ಟೆಲ್ ಗ್ರಂಥಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ಅನುಕೂಲಕರವಾದ ಪುಸ್ತಕಗಳಿಗೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದರು.
ವಿದ್ಯಾರ್ಥಿಗಳಿಗೆ ಸ್ಪಂದನೆ ನೀಡಿದ ಶಾಸಕ ಕೆ.ಎಸ್.ಈಶ್ವರಪ್ಪ, ಅಧಿಕಾರಿ, ಸಿಬ್ಬಂದಿ ವಿದ್ಯಾರ್ಥಿಗಳಿಗೆ ಉತ್ತಮ ಊಟ ನೀಡಲು ಅವಶ್ಯಕವಾದ ಕ್ರಮಗಳನ್ನು ವಹಿಸಬೇಕು. ಹಾಸ್ಟೆಲ್ ನಿರ್ವಹಣೆಗೆ ಸಾಕಷ್ಟು ಸಿಬ್ಬಂದಿ ನೇಮಕ ಮಾಡಲಾಗಿದ್ದು, ಈ ಬಗ್ಗೆ ಹೆಚ್ಚಿನ ಗಮನ ಮತ್ತು ಕಾಳಜಿ ವಹಿಸಬೇಕು ಎಂದು ಸೂಚನೆ ನೀಡಿದರು.
READ | ಇಂದು ವಿಶ್ವ ಸೈಕಲ್ ದಿನ, ಸೈಕಲ್ ದಿನದ ವಿಶೇಷವೇನು? ಸೈಕಲ್ ತುಳಿಯುವ ಮುನ್ನ ವಹಿಸಬೇಕಾದ ಎಚ್ಚರಿಕೆಗಳೇನು?
ಕಸ ವಿಲೇವಾರಿಗೆ ಹೆಚ್ಚುವರಿ 70 ವಾಹನ
ಕಸ ವಿಲೇವಾರಿ ಮಾಡಲು ನಗರದಲ್ಲಿ 70 ವಾಹನಗಳು ಇದ್ದು ಹೆಚ್ಚುವರಿಯಾಗಿ ಇನ್ನೂ 20 ವಾಹನಗಳು ಬರಲಿವೆ. ಹಾಸ್ಟೆಲ್ ಗೂ ವಾಹನ ಬರುವ ವ್ಯವಸ್ಥೆ ಮಾಡಲಾಗುವುದು. ನಗರದ ಸುತ್ತಮುತ್ತ ನಿರಂತರ ಶುದ್ಧ ಕುಡಿಯುವ ನೀರಿಗಾಗಿ 95 ಕೋಟಿ ರೂಪಾಯಿ ವೆಚ್ಚದ ಯೋಜನೆಗೆ ಟೆಂಡರ್ ಕರೆಯಲಾಗಿದ್ದು, ಯೋಜನೆ ಪೂರ್ಣಗೊಂಡ ನಂತರ ನೀರು ನಿರಂತರವಾಗಿ ಲಭಿಸಲಿದೆ. 24/7 ಯೋಜನೆ ಕೂಡ ಪ್ರಗತಿಯಲ್ಲಿದೆ. ಇನ್ನು ನಗರ ಕೇಂದ್ರ ಗ್ರಂಥಾಲಯ ಅತ್ಯುತ್ತಮವಾಗಿದೆ. ಅದನ್ನು ವಿದ್ಯಾರ್ಥಿಗಳು ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಅಗತ್ಯ ಪುಸ್ತಕಗಳ ಪಟ್ಟಿ ಮಾಡಿ ಅಧಿಕಾರಿಗಳು ತರಿಸಿಕೊಳ್ಳುವಂತೆ ತಿಳಿಸಿದ ಈಶ್ವರಪ್ಪ, ವಿದ್ಯಾರ್ಥಿಗಳು ತಮಗೆ ಯಾವುದೇ ರೀತಿಯ ತೊಂದರೆ ಇದ್ದಲ್ಲಿ ತಮ್ಮ ಗಮನಕ್ಕೆ ತರಬೇಕು. ತಾವು ಸಹಕರಿಸಲು ಸದಾ ಸಿದ್ಧ ಎಂದರು.
ಕಾರ್ಯಕ್ರಮದಲ್ಲಿ ಸೂಡಾ ಅಧ್ಯಕ್ಷ ಎನ್.ಜಿ.ನಾಗರಾಜ್, ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಧೀರರಾಜ್ ಹೊನ್ನವಿಲೆ, ಡಿಎಸ್ಎಸ್ ಅಧ್ಯಕ್ಷ ಹಾಲೇಶಪ್ಪ, ಜಗದೀಶ್, ಅಣ್ಣಪ್ಪ, ಶಿವಾಜಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ.ನಾಗರಾಜ್, ಸಹಾಯಕ ನಿರ್ದೇಶಕ ಮಲ್ಲೇಶಪ್ಪ ಡಿ ಹಾಗೂ ಇತರರು ಹಾಜರಿದ್ದರು.
https://suddikanaja.com/2021/09/27/sports-minister-dr-narayangowda-visit-to-shivamogga/