ಸುದ್ದಿ ಕಣಜ.ಕಾಂ | TALUK | CRIME NEWS
ಭದ್ರಾವತಿ: ಅನ್ವರ್ ಕಾಲೋನಿಯ ಗೋಮಾಂಸ ಅಂಗಡಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, 50 ಕೆಜಿ ಗೋಮಾಂಸ ವಶಕ್ಕೆ ಪಡೆದು 29 ಹಸುಗಳನ್ನು ರಕ್ಷಿಸಿದ್ದಾರೆ.
ಅಕ್ರಮವಾಗಿ ನಡೆಸುತ್ತಿದ್ದ ಕಸಾಯಿಖಾನೆ ಮತ್ತು ಅಂಗಡಿಯ ಮೇಲೆ ಓಲ್ಡ್ ಟೌನ್ ಪೊಲೀಸರು ಏಕಾಏಕಿ ದಾಳಿ ಮಾಡಿದ್ದು, ಹಸುಗಳನ್ನು ರಕ್ಷಣೆ ಮಾಡಿದ್ದಾರೆ. ಆರೋಪಿಗಳು ಪರಾರಿಯಾಗಿದ್ದು, ಹುಡುಕಾಟ ನಡೆದಿದೆ. ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.