ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ತಾಲೂಕಿನ ಆಯನೂರು ಗ್ರಾಮದಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
READ | ಇಂದು ಶಿವಮೊಗ್ಗ ನಗರ, ಗ್ರಾಮೀಣ ಭಾಗದಲ್ಲಿ ಕರೆಂಟ್ ಇರಲ್ಲ, ಏರಿಯಾಗಳ ಮಾಹಿತಿ ಇಲ್ಲಿದೆ
ಆಯನೂರು ಗ್ರಾಮದ ನಿವಾಸಿ ಜಬೀವುಲ್ಲಾ (49) ಬಂಧಿತ ಆರೋಪಿ. ಮಾದಕ ವಸ್ತು ಗಾಂಜಾ ಸೇವಿಸಿ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವುದನ್ನು ಗಮನಿಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ನಂತರ ವಿಚಾರಿಸಿದಾ ಆತ ಗಾಂಜಾ ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ.
ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಬಳಿಕ ಆತನ ಗಾಂಜಾ ಸೇವನೆ ಮಾಡಿರುವುದು ಖಚಿತವಾಗಿದೆ. ಶಿವಮೊಗ್ಗ ಎಸ್.ಇ.ಎನ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.