ಸುದ್ದಿ ಕಣಜ.ಕಾಂ | DISTRICT | POLITICAL NEWS
ಶಿವಮೊಗ್ಗ: ದಾವಣಗೆರೆಯಲ್ಲಿ ಆಗಸ್ಟ್ 3ರಂದು ನಡೆಯಲಿರುವ ಸಿದ್ಧರಾಮೋತ್ಸವ(Siddaramotsava)ಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಸುಮಾರು 30,000 ಜನ ತೆರಳಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ (HS Sundresh)ತಿಳಿಸಿದರು.
ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್(Congress)ನಿಂದ ಮಾಜಿ ಸಿಎಂ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಜನ್ಮದಿನದ ಪ್ರಯುಕ್ತ ‘ಸಿದ್ಧರಾಮೋತ್ಸವ’ ಆಯೋಜಿಸಲಾಗಿದೆ. ಇದು ಪಕ್ಷದ ಸಂಘಟನೆಗೆ ಪೂರಕವಾಗಲಿದೆ ಎಂದರು.
ಸಿದ್ಧರಾಮೋತ್ಸವದ ಬಳಿಕ ಬಿಜೆಪಿ ಪತನದ ದಿನಗಳು ಆರಂಭವಾಗಲಿವೆ. ಶಾಸಕ ಕೆ.ಎಸ್.ಈಶ್ವರಪ್ಪ ಸೇರಿದಂತೆ ಕೆಲವು ನಾಯಕರು ಇಬ್ಭಾಗವಾಗಲಿದ್ದಾರೆ.
ಎಚ್.ಎಸ್.ಸುಂದರೇಶ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ
ರಾಹುಲ್ ಗಾಂಧಿ ಹಲವರು ಭಾಗಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi), ರಾಜ್ಯದ ನಾಯಕರಾದ ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಆರ್.ವಿ. ದೇಶಪಾಂಡೆ ಇತರರು ಭಾಗವಹಿಸಲಿದ್ದಾರೆ. ಸಿದ್ಧರಾಮೋತ್ಸವಕ್ಕೆ ರಾಜ್ಯಮಟ್ಟದಲ್ಲಿ ಅಮೃತ ಮಹೋತ್ಸವ ಸಮಿತಿ ರಚಿಸಲಾಗಿದೆ. ಈ ಸಮಿತಿ ರಾಜ್ಯಾಧ್ಯಕ್ಷರಾಗಿ ಕೆ.ಎನ್. ರಾಜಣ್ಣ, ಗೌರವಾಧ್ಯಕ್ಷರಾಗಿ ಆರ್.ವಿ. ದೇಶಪಾಂಡೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಪಕ್ಷದ ಪ್ರಮುಖರಾದ ಚಂದ್ರಭೂಪಾಲ್, ಯಮುನಾ ರಂಗೇಗೌಡ, ರೇಖಾ ರಂಗನಾಥ್, ಮೆಹಖ್ ಷರೀಫ್, ಮಂಜುಳಾ ಶಿವಣ್ಣ, ಶಂಕರಘಟ್ಟ ರಮೇಶ್, ಎಸ್.ಪಿ. ಶೇಷಾದ್ರಿ ಉಪಸ್ಥಿತರಿದ್ದರು.
READ | ಕಡಿದಾಳ್ ಮಂಜಪ್ಪ ಸಮಾಧಿಯಿಂದ ಪಾದಯಾತ್ರೆ, ಕಾರಣವೇನು?
https://suddikanaja.com/2022/01/17/engineering-students-of-davanagere-introduced-pickle-from-arecanut-preparation-method-is-here/