ಸುದ್ದಿ ಕಣಜ.ಕಾಂ | DISTRICT | COURT NEWS
ಶಿವಮೊಗ್ಗ: ವ್ಯಕ್ತಿಯೊಬ್ಬರಿಗೆ ಅವಾಚ್ಯವಾಗಿ ನಿಂದಿಸಿ, ಜಾತಿ ನಿಂದನೆ ಮಾಡಿದ ವ್ಯಕ್ತಿಗೆ 3 ವರ್ಷ 6 ತಿಂಗಳು ಸಾಧಾರಣ ಕಾರಾವಾಸ ಶಿಕ್ಷೆ ಮತ್ತು 3,000 ರೂಪಾಯಿ ದಂಡ, ದಂಡವನ್ನು ಕಟ್ಟಲು ವಿಫಲರಾದರೆ ಹೆಚ್ಚುವರಿಯಾಗಿ 3 ತಿಂಗಳ ಸಾದಾ ಕಾರವಾಸ ಶಿಕ್ಷೆ ವಿಧಿಸಿ ನ್ಯಾಯಾಲಯ ಬುಧವಾರ ಆದೇಶಿಸಿದೆ.
ಹೊಸನಗರ ತಾಲೂಕಿನ ಬಂಟೋಡಿಯ ಗ್ರಾಮದ ನಿವಾಸಿ ಮೋಹನ್(44) ಎಂಬುವವರಿಗೆ ಶಿಕ್ಷೆ ವಿಧಿಸಲಾಗಿದೆ.
READ | ಶಿವಮೊಗ್ಗದಲ್ಲಿ ನಡು ರಸ್ತೆಯಲ್ಲೇ ರೌಡಿಶೀಟರ್ ಹತ್ಯೆ
2015ರ ಜನವರಿ 1ರಂದು ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಗೆರೆ ಮಠದ ಮತ್ತಿಕೈ ಗ್ರಾಮದ ನಿವಾಸಿ ಸತೀಶ್(27) ಮತ್ತು ಆತನ ತಂದೆ ನಾರಾಯಣ (45) ಎಂಬುವವರು ಮೋಹನ್ ಅವರ ಜಮೀನಿನ ಹತ್ತಿರ ನಡೆದುಕೊಂಡು ಹೋಗುತ್ತಿರುವಾಗ ಮೋಹನ ಮತ್ತು ಆತನ ಮಗ ಸೇರಿಕೊಂಡು ಹಣದ ವಿಚಾರದಲ್ಲಿ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿ, ಕತ್ತಿಯಿಂದ ಸತೀಶ್ ಅವರ ತಲೆಗೆ ಮಾರಣಾಂತಿಕ ಹಲ್ಲೆ ಮಾಡಿದ್ದರು.
ಐಪಿಸಿ ಕಲಂ 307 ಐಪಿಸಿ ಮತ್ತು ಎಸ್.ಸಿ ಎಸ್.ಟಿ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿಕೊಂಡ ನಗರ ಪೊಲೀಸರು ತನಿಖೆ ನಡೆಸಿ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಆರ್.ಪಲ್ಲವಿ ಅವರು ವಿಚಾರಣೆ ನಡೆಸಿ ಐಪಿಸಿ ಕಲಂ 307 ಅಡಿಯಲ್ಲಿ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ ಶಿಕ್ಷೆ ನೀಡಿ ಆದೇಶ ಹೊರಡಿಸಿದ್ದಾರೆ. ಸರ್ಕಾರಿ ಅಭಿಯೋಜಕ ಪುಷ್ಪ ಅವರು ಪ್ರಕರಣದ ವಾದ ಮಂಡಿಸಿದ್ದರು.
https://suddikanaja.com/2022/05/27/shivamogga-court-judgment-on-attempt-to-murder-of-a-person-near-hosamane-canal/