ಸುದ್ದಿ ಕಣಜ.ಕಾಂ | DISTRICT | RAIN DAMAGE
ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಿಂದ ಸುರಿಯುತ್ತಿರುವ ನಿರಂತರ ಮಳೆಗೆ ಕೋಟ್ಯಾಂತರ ರೂಪಾಯಿ ಮೌಲ್ಯದ ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ (Dr.R.Selvamani) ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆಹಾನಿಯಿಂದ ಉಂಟಾದ ಹಾನಿಗೆ ತಕ್ಷಣ ಪರಿಹಾರ ನೀಡಲು ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
MORE NEWS | ರಾಜೇಂದ್ರನಗರದಲ್ಲಿ ಮನೆಯ ಮೇಲೆ ಉರುಳಿದ ಬೃಹತ್ ಮರ | ರಾಗಿಗುಡ್ಡದಲ್ಲಿ ಗೋಡೆ ಕುಸಿದು ತಾಯಿ, ಮಗಳಿಗೆ ಗಾಯ, ಅವಶೇಷ ಅಡಿ ಸಿಲುಕಿದವರು ಸೇಫ್
- ಜಿಲ್ಲೆಯ ಯಾವ ಭಾಗದಲ್ಲಿ ಏನಾಗಿದೆ?
- ಮಳೆಯಿಂದ ಸೊರಬ, ಹೊಸನಗರ ತಾಲೂಕುಗಳಲ್ಲಿ ತಲಾ ಒಂದೊಂದು ಜೀವ ಹಾನಿಯಾಗಿದೆ. ಜಿಲ್ಲೆಯಲ್ಲಿ 8 ಜಾನುವಾರು ಮೃತಪಟ್ಟಿವೆ.
- ಇದುವರೆಗೆ 397 ಮನೆ(House)ಗಳಿಗೆ ಹಾನಿ(Damage)ಯಾಗಿದ್ದು, ಪೂರ್ಣ ಪ್ರಮಾಣದಲ್ಲಿ 30, ಮನೆಗಳು , ಭಾಗಶಃ 626, ತೀವ್ರ ತೆರನಾಗಿ 98 ಮನೆ ಹಾನಿಗೊಳಗಾಗಿವೆ.
- ಸುಮಾರು 774 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಭತ್ತ (Paddy) ಮತ್ತು ಮೆಕ್ಕೆಜೋಳ(Maize)ದ ಬೆಳೆ ಹಾನಿಗೊಳಗಾಗಿವೆ.
- 258 ಕಿ.ಮೀ. ರಸ್ತೆ, 546 ವಿದ್ಯುತ್ ಕಂಬಗಳು ಹಾಗೂ 6 ಟ್ರಾನ್ಸ್’ಫರ್ಮರ್ಗಳು, ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳು ನಾಶವಾಗಿವೆ
ಕಾಳಜಿ ಕೇಂದ್ರಗಳ ಸ್ಥಾಪನೆ
ತುಂಗಾ, ಭದ್ರಾ ಜಲಾಶಯಗಳ ಅಚ್ಚುಕಟ್ಟು ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ಬರುತ್ತಿರುವ ಒಳಹರಿವು ಹೆಚ್ಚಿದೆ. ಭದ್ರಾದಿಂದ ಪ್ರಸ್ತುತ ನಿತ್ಯ ಸುಮಾರು 45,000 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. ಜಲಾಶಯದ ಪಾತ್ರದಲ್ಲಿನ ನಿವಾಸಿಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ಸೂಚಿಸಲಾಗಿದೆ. ಅಲ್ಲದೇ ಈ ಭಾಗದ ಜನರ ಸುರಕ್ಷತೆಗಾಗಿ ಭದ್ರಾವತಿಯಲ್ಲಿ ಒಟ್ಟು 4 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಸುಮಾರು 400 ಮಂದಿ ಸಂತ್ರಸ್ಥರಿಗೆ ತಾತ್ಕಾಲಿಕ ಆಶ್ರಯ ಒದಗಿಸಲಾಗಿದೆ. ಕಾಳಜಿ ಕೇಂದ್ರದಲ್ಲಿ ತಾತ್ಕಾಲಿಕ ವಸತಿ, ಔಷಧ ಹಾಗೂ ಊಟೋಪಹಾರ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಜುಲೈ ಅಂತ್ಯದವರೆಗೆ ಆಗುಂಬೆ ಘಾಟಿಯಲ್ಲಿ ಸಂಚಾರ ನಿಷೇಧ
ಆಗುಂಬೆ ರಸ್ತೆಯಲ್ಲಿ ಭೂಕುಸಿತ, ಮರಗಳು ಧರೆಗುರುಳಿರುವ ಬಗ್ಗೆ ಮಾಹಿತಿಯಿದ್ದು, ಈ ತಿಂಗಳ ಅಂತ್ಯದವರೆಗೆ ಈ ಮಾರ್ಗದಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಅಲ್ಲದೇ ಪರ್ಯಾಯ ರಸ್ತೆ ಸಂಚಾರಕ್ಕೆ ಮಾರ್ಗ ಸೂಚಿಸಲಾಗಿದೆ.
ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್.ಹೊನ್ನಳ್ಳಿ ಉಪಸ್ಥಿತರಿದ್ದರು.
https://suddikanaja.com/2022/03/19/home-minister-aarga-jnanendra-visited-the-farmers-farm-in-keegadi-village-which-was-damaged-by-wild-elephants/