ಸುದ್ದಿ ಕಣಜ.ಕಾಂ | DISTRICT | BJP PROTEST
ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ(Murder)ಯನ್ನು ನೆನೆದು ಬಿಜೆಪಿ ಪ್ರಮುಖ, ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ(ಚೆನ್ನಿ) ಬುಧವಾರ ಗೊಳೋ ಎಂದು ಅತ್ತರು.
READ | ಶಿವಮೊಗ್ಗದಲ್ಲಿ ಪೊಲೀಸರ ಹೈಅಲರ್ಟ್, ತಲ್ವಾರ್ ಸೇರಿ ಮಾರಕಾಸ್ತ್ರಗಳು ಸೀಜ್
ಹಿಂದೂ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ಹಲ್ಲೆ, ಹತ್ಯೆಯಂತಹ ಘಟನೆಗಳಿಂದ ಬೇಸರವಾಗಿದೆ. ಹಿಂದೂಗಳಿಗೆ ತಮ್ಮನ್ನು ತಾವು ರಕ್ಷಿಸಿಕೊಳ್ಳುವುದಕ್ಕೆ ಬರುತ್ತದೆ. ಆದರೆ, ಕಾನೂನಿಗೆ ಗೌರವಿಸಿ ಸುಮ್ಮನಿದ್ದೇವೆ ಎಂದು ಶಿವಪ್ಪನಾಯಕ ವೃತ್ತದಲ್ಲಿ ನಡೆದ ಪ್ರತಿಭಟನೆ ವೇಳೆ ಚೆನ್ನಿ ಹೇಳಿದರು.
ಸಜ್ಜನಿಕೆಯನ್ನು ದೌರ್ಬಲ್ಯ ಎಂದುಕೊಳ್ಳಬೇಡಿ. ಇಷ್ಟೆಲ್ಲ ದೌರ್ಜನ್ಯಗಳು ನಡೆಯುತ್ತಿದ್ದರೂ ಸುಮ್ಮನಿದ್ದೇವೆಂದರೆ ಸರಕಾರ, ಕಾನೂನು ಮತ್ತು ವ್ಯವಸ್ಥೆಯ ಮೇಲಿನ ನಂಬಿಕೆಯಿಂದ.
| ಟಿ.ಡಿ.ಮೇಘರಾಜ್, ಬಿಜೆಪಿ ಜಿಲ್ಲಾಧ್ಯಕ್ಷ
ಹಿಂದೂಗಳ ಪ್ರಾಣಕ್ಕೆ ಬೆಲೆಯಿಲ್ಲದಂತಾಗಿದೆ. ಸಮಾಜವನ್ನು ರಕ್ಷಿಸುವುದೇ ಕಷ್ಟವಾಗಿದೆ. ಸರ್ಕಾರ ಹಿಂದೂಗಳ ಮರಣಗಳನ್ನು ಲೆಕ್ಕಹಾಕಲು ಮಾತ್ರ ಇದೆ. ಹಿಂದೂ ಸಮಾಜದವರು ಮೃತಪಟ್ಟಾಗ ಶ್ರದ್ಧಾಂಜಲಿ ಸಭೆಗಳನ್ನು ಮಾಡಬೇಕಾಗಿ ಬಂದಿರುವುದು ದುರಂತವಾಗಿದೆ ಎಂದು ಹೇಳಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್ ಮಾತನಾಡಿ, ಸರ್ಕಾರವನ್ನು ಮೆಚ್ಚಿಸಲು ಹಿಂದೂ ಸಂಘಟನೆ ಅಸ್ತಿತ್ವಕ್ಕೆ ಬಂದಿಲ್ಲ. ಹಿಂದೂ ಸಂಘಟನೆಯ ಕೆಲವರು ಸರ್ಕಾರದ ಭಾಗವಾಗಿದ್ದಾರೆ ಅಷ್ಟೇ. ಹಿಂದೂಗಳ ರಕ್ಷಣೆ ಮಾಡಬೇಕಾದವರು ಯೋಚನೆ ಮಾಡಬಾರದು. ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ನಗರ ಬಿಜೆಪಿ ಅಧ್ಯಕ್ಷ ಜಗದೀಶ್, ಎಸ್.ದತ್ತಾತ್ರಿ, ಕೆ.ಈ. ಕಾಂತೇಶ್, ರಮೇಶ್(ರಾಮು) ಜಿಲ್ಹಾ ಕಾರ್ಯದರ್ಶಿ ಹೃಷಿಕೇಶ್ ಪೈ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಎಂ.ಬಿ. ಹರಿಕೃಷ್ಣ, ಸಂತೋಷ್ ಬಳ್ಳೆಕೆರೆ, ಮೋಹನ್ ರೆಡ್ಡಿ, ಆರ್.ವಿ. ದರ್ಶನ್, ಉಪ ಮೇಯರ್ ಶಂಕರ್ ಗನ್ನಿ ಉಪಸ್ಥಿತರಿದ್ದರು.
ಚಕ್ರತೀರ್ಥರ ತಂಟೆಗೆ ಬಂದರೆ ನಿಮ್ಮ ‘ಚಕ್ರ’ವೇ ಬದಲಾಗಲಿದೆ, ಕಸಾಪ ಅಧ್ಯಕ್ಷರಿಗೆ ವಾರ್ನಿಂಗ್