ಸುದ್ದಿ ಕಣಜ.ಕಾಂ | DISTRICT | RAITA SHAKTHI
ಶಿವಮೊಗ್ಗ: 2022-23ನೇ ಸಾಲಿನಲ್ಲಿ ಕೃಷಿ ಇಲಾಖೆ ವತಿಯಿಂದ ‘ರೈತಶಕ್ತಿ’ (Raita Shakthi) ಎಂಬ ಹೊಸ ಯೋಜನೆ(Scheme)ಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಈ ಯೋಜನೆಯಡಿ ಕೃಷಿ ಉತ್ಪಾದಕತೆ(Agricultural productivity)ಯನ್ನು ಹೆಚ್ಚಿಸುವಲ್ಲಿ ರೈತರಿಗೆ ಕೃಷಿ ಯಂತ್ರೋಪಕರಣಗಳ ಬಳಕೆಯನ್ನು ಪ್ರೋತ್ಸಾಹಿಸಲು ಹಾಗೂ ಇಂಧನ ವೆಚ್ಚದ ಭಾರವನ್ನು ಕಡಿಮೆ ಮಾಡಲು ಪ್ರತಿ ಎಕರೆಗೆ 250 ರೂಪಾಯಿಯಂತೆ ಗರಿಷ್ಠ 5 ಎಕರೆಯವರೆಗೆ 1250 ರೂಪಾಯಿಗಳನ್ನು ಡಿಬಿಟಿ ಮೂಲಕ ಡಿಸೇಲ್ ಸಬ್ಸಿಡಿ ನೀಡುವ ‘ರೈತಶಕ್ತಿ’ ಯೋಜನೆ ಇದಾಗಿದೆ.
READ | ದುರ್ಗಿಗುಡಿಯಲ್ಲಿ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ, 21 ಪ್ರಕರಣ ದಾಖಲು
ಯಾರಿಗೆಲ್ಲ ಸಿಗಲಿದೆ ಸಬ್ಸಿಡಿ, ಏನು ಅರ್ಹತೆ?
ಈ ಯೋಜನೆಯಡಿ ರೈತರು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಗರಿಷ್ಠ 5 ಎಕರೆಯವರೆಗೆ ಫ್ರೂಟ್ಸ್ ಪೋರ್ಟಲ್ ನಲ್ಲಿ(FRUITS) ನೋಂದಣಿ ಗುರುತಿನ (FID) ಸಂಖ್ಯೆಯಲ್ಲಿ ನಮೂದಿಸಿರುವ ಹಿಡುವಳಿಯ ಆಧಾರದ ಮೇಲೆ ರೈತರಿಗೆ ಡಿಸೇಲ್ ಸಹಾಯಧನ ವರ್ಗಾವಣೆಯಾಗಲಿದೆ.
ಜಿಲ್ಲೆಯ ರೈತರು ಈ ಯೋಜನೆಯ ಪ್ರಯೋಜನ ಪಡೆಯಲು ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ತಮ್ಮ ಜಮೀನಿನ ಎಲ್ಲ ಸರ್ವೆ ನಂಬರ್’ಗಳ ವಿಸ್ತೀರ್ಣವನ್ನು ಫ್ರೂಟ್ಸ್ ಪೋರ್ಟಲ್’ನಲ್ಲಿ ಆಗಸ್ಟ್ 20 ರೊಳಗೆ ನೋಂದಣಿ ಮಾಡಿಸಬೇಕು.
ಈ ದಿನಾಂಕದವರೆಗೆ ಫ್ರೂಟ್ಸ್ ಪೋರ್ಟಲ್’ನಲ್ಲಿ ನೋಂದಾವಣಿಯಾದ ವಿಸ್ತೀರ್ಣಕ್ಕೆ ಅನುಗುಣವಾಗಿ ಡಿಸೇಲ್ ಸಬ್ಸಿಡಿ ಡಿಬಿಟಿ ಮುಖಾಂತರ ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗೆ ದೊರೆಯಲಿದೆ. ಇದುವರೆಗೆ ಫ್ರೂಟ್ಸ್ ತಂತ್ರ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳದ ರೈತರು ಕೂಡಲೇ ನೋಂದಣಿಯನ್ನು ಮಾಡಿಸಿಕೊಳ್ಳುವುದು.
ಡಿಸೇಲ್’ಗೆ ಸಿಗಲಿರುವ ಸಬ್ಸಿಡಿ ಪ್ರಮಾಣ | |
ಎಕರೆ | ಸಬ್ಸಿಡಿ (ರೂ.ಗಳಲ್ಲಿ) |
ಒಂದು ಎಕರೆವರೆಗೆ | 250 |
ಎರಡು ಎಕರೆವರೆಗೆ | 500 |
ಮೂರು ಎಕರೆವರೆಗೆ | 750 |
ನಾಲ್ಕು ಎಕರೆವರೆಗೆ | 1000 |
ನಾಲ್ಕು ಎಕರೆ ಮೇಲ್ಪಟ್ಟು | 1250 |
ರೈತರು ಆಗಸ್ಟ್ 20 ರೊಳಗೆ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಫ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ ಮಾಲಿಕತ್ವದ ಎಲ್ಲ ಜಮೀನಿನ ಸರ್ವೆ ನಂಬರ್’ವಾರು ವಿಸ್ತೀರ್ಣ ನೊಂದಣಿಯಾಗಿರುವ ಬಗ್ಗೆ ಖಾತರಿಪಡಿಸಿಕೊಳ್ಳುವುದು ಅಥವಾ ನೋಂದಣಿ ಮಾಡಿಸಿಕೊಂಡು ಈ ಯೋಜನೆಯ ಸದುಪಯೋಗಪಡೆದುಕೊಳ್ಳಬೇಕೆಂದು ಜಂಟಿ ಕೃಷಿ ನಿರ್ದೇಶಕಿ ಜಿ.ಸಿ.ಪೂರ್ಣಿಮ ತಿಳಿಸಿದ್ದಾರೆ.
https://suddikanaja.com/2021/09/20/animal-husbandry-department/