ಶಿವಮೊಗ್ಗ ಬಿಜೆಪಿ ಕಚೇರಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಕಾರಣವೇನು?

BJP

 

 

ಸುದ್ದಿ ಕಣಜ.ಕಾಂ | DISTRICT |  DRAUPADI MURMU
ಶಿವಮೊಗ್ಗ: ಎನ್.ಡಿ.ಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಗೆಲುವು ಸಾಧಿಸಿ ದೇಶದ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವುದರಿಂದ ನಗರದ ಬಿಜೆಪಿ ಕಚೇರಿ ಎದುರು ಗುರುವಾರ ರಾತ್ರಿ ಸಂಭ್ರಮಾಚರಣೆ ಮಾಡಲಾಯಿತು.
ಬಿಜೆಪಿ ಕಾರ್ಯಕರ್ತರು ಪಕ್ಷದ ಕಚೇರಿಯ ಎದುರು ಸೇರಿ ಬಿಜೆಪಿಯ ಪರ ಘೋಷಣೆಗಳನ್ನು ಕೂಗಲಾಯಿತು. ಪಟಾಕಿ ಹಾರಿಸಿ ಸಂಭ್ರಮಿಸಲಾಯಿತು.

READ | ಗುಡ್ಡೇಕಲ್ ಜಾತ್ರೆ, ಶಿವಮೊಗ್ಗದ ಈ ಪ್ರದೇಶಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗಕ್ಕೆ ಆದೇಶ 

ವಿಭಾಗ ಪ್ರಭಾರ ಗಿರೀಶ್ ಪಟೇಲ್, ನಗರ ಅಧ್ಯಕ್ಷ ಎನ್.ಕೆ.ಜಗದೀಶ್, ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಸ್ಬೂಡಾ ಅಧ್ಯಕ್ಷ ಎನ್.ಜಿ. ನಾಗರಾಜ್, ಜಿಲ್ಲಾ ಕಾರ್ಯದರ್ಶಿ ಹೃಷಿಕೇಶ್ ಪೈ, ಜಿಲ್ಲಾ ಖಜಾಂಚಿ ಎಸ್.ರಮೇಶ್, ರಾಮು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಲಕ್ಷ್ಮೀಪತಿ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೋಹನ್ ರೆಡ್ಡಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!