ಸುದ್ದಿ ಕಣಜ.ಕಾಂ | DISTRICT | POLITICAL NEWS
ಶಿವಮೊಗ್ಗ: ತೀರ್ಥಹಳ್ಳಿ (Thirthahalli) ತಾಲ್ಲೂಕಿನ ಮಾಜಿ ಮುಖ್ಯಮಂತ್ರಿ ದಿ.ಕಡಿದಾಳ್ ಮಂಜಪ್ಪ (Kadidal Manjappa) ಅವರ ಸಮಾಧಿಯಿಂದ ತೀರ್ಥಹಳ್ಳಿ ತಾಲೂಕಿನವರೆಗೆ ಜುಲೈ 28ರಂದು ಪಾದಯಾತ್ರೆ (Padayatre) ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಸಹಕಾರಿ ವಿಭಾಗದ ರಾಜ್ಯ ಸಂಚಾಲಕ ಆರ್.ಎಂ. ಮಂಜುನಾಥಗೌಡ (R.M. Manjunath gowda) ಹೇಳಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆದ ಮಾಧ್ಯಮಗೋಷ್ಠಿ ಮಾತನಾಡಿದ ಅವರು, ಸ್ವಾತಂತ್ರ್ಯದ 75ನೇ ವರ್ಷದ ಅಮೃತ ಮಹೋತ್ಸವ ಹಿನ್ನೆಲೆ ಎಐಸಿಸಿ ಮತ್ತು ಕೆಪಿಸಿಸಿ ಸೂಚನೆ ನೀಡಿದ್ದು, ರಾಜ್ಯದ ಪ್ರತಿ ಜಿಲ್ಲೆಯಲ್ಲಿ 75 ಕಿಲೋ ಮೀಟರ್ ಪಾದಯಾತ್ರೆಯನ್ನು ಕಾಂಗ್ರೆಸ್ ಸಹಕಾರಿ ವಿಭಾಗದಿಂದ ಆಯೋಜಿಸಲಾಗಿದೆ ಎಂದರು.
READ | ವಸತಿ ಪ್ರದೇಶದಲ್ಲೇ ಗಾಂಜಾ ಘಮಲು, ಪೊಲೀಸರಿಗೆ ಮಾಹಿತಿ ನೀಡಿದ ಬೇಳೂರು
ಇದರ ಭಾಗವಾಗಿಯೇ ತೀರ್ಥಹಳ್ಳಿಯಲ್ಲಿ ಪಾದಯಾತ್ರೆ ಏರ್ಪಡಿಸಲಾಗಿದೆ. ಆಗಸ್ಟ್ 10ರೊಳಗೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಪಾದಯಾತ್ರೆ ನಡೆಯಲಿದೆ.
28 ರಂದು ಬೆಳಗ್ಗೆ 8 ಗಂಟೆಗೆ ಮಾಜಿ ಮುಖ್ಯಮಂತ್ರಿ ದಿ. ಕಡಿದಾಳ್ ಮಂಜಪ್ಪ ಅವರ ಸಮಾಧಿಗೆ ಪೂಜೆ ಸಲ್ಲಿಸಿ ಪಾದಯಾತ್ರೆಗೆ ಚಾಲನೆ ನೀಡಲಾಗುವುದು. 14 ಕಿ.ಮೀ. ದೂರವಿರುವ ತೀರ್ಥಹಳ್ಳಿಗೆ ಪಾದಯಾತ್ರೆ ಮೂಲಕ ಬಂದು ತಾಲೂಕು ಕಚೇರಿ ಎದುರು ಸಭೆ ನಡೆಸಲಾಗುವುದು ಎಂದರು.
ಪಾದಯಾತ್ರೆಯ ಮೂಲ ಉದ್ದೇಶ ಜಾಗೃತಿ
ಪಾದಯಾತ್ರೆಯ ಪ್ರಮುಖ ಉದ್ದೇಶವು ಯುವಪೀಳಿಗೆಯಲ್ಲಿ ಜಾಗೃತಿ ತರುವುದಾಗಿದೆ. ಗಾಂಧೀಜಿ, ನೆಹರೂ ಸೇರಿ ಇನ್ನಿತರ ನಾಯಕರು ದೇಶಕ್ಕೆ ಸಲ್ಲಿಸಿದ ಸೇವೆಯನ್ನು ನೆನಪಿಸುವುದಾಗಿದೆ. ಇದರ ಹಿಂದೆ ರಾಜಕೀಯ ಕಾರಣವಿಲ್ಲ ಎಂದು ಹೇಳಿದರು.
ಪ್ರಮುಖರಾದ ಪಿ.ಒ. ಶಿವಕುಮಾರ್, ಷಡಾಕ್ಷರಿ, ಪದ್ಮನಾಭ್, ಎಸ್.ಕೆ. ಮರಿಯಪ್ಪ, ಶಂಕರಘಟ್ಟ ರಮೇಶ್, ಎಸ್.ಪಿ. ಶೇಷಾದ್ರಿ, ಜಗದೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
https://suddikanaja.com/2020/12/25/cs-shadakshari-address-government-employee-in-shivamogga/