ಸುದ್ದಿ ಕಣಜ.ಕಾಂ | KARNATAKA | MARKET TRENDS
ಶಿವಮೊಗ್ಗ: ಶ್ರಾವಣ ಮಾಸದ ಕೊಡುಗೆಯಾಗಿ ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಕೆ.ಜಿ ಗೆ ರೂ.1 ಹೆಚ್ಚಿಸಲಾಗುವುದು ಎಂದು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷ ಶ್ರೀಪಾದರಾವ್ ಘೋಷಿಸಿದರು.
ಮಾಚೇನಹಳ್ಳಿ ಹಾಲಿನ ಡೇರಿಯಲ್ಲಿ ಸೋಮವಾರ ಕರೆಯಲಾಗಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟವು ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿ ಹಾಲು ಖರೀದಿ ದರವನ್ನು ಕಾಲ ಕಾಲಕ್ಕೆ ಪರಿಷ್ಕರಿಸುತ್ತಾ ಬಂದಿದೆ. ಒಕ್ಕೂಟದ ವ್ಯಾಪ್ತಿಯಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟದ ಪ್ರಗತಿಯಾಗಿದ್ದು, ಆಗಸ್ಟ್ 11ರಿಂದ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಾದ ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಕೆ.ಜಿ. ಗೆ ರೂ.1 ಹೆಚ್ಚಿಸಲಾಗುವುದು ಎಂದು ತಿಳಿಸಿದರು.
ಗ್ರಾಹಕರಿಗೆ ಬಿಸಿ, ರೈತರಿಗೆ ಖುಷಿ
ಈ ದರ ಹೆಚ್ಚಳ ಕುರಿತು ಆ.2ರಂದು ನಡೆದ ಒಕ್ಕೂಟದ 421 ನೇ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಒಕ್ಕೂಟದಿಂದ ಸಂಘಗಳಿಗೆ ಹಾಲಿ ನೀಡುತ್ತಿರುವ ದರ ಪ್ರತಿ ಕೆ.ಜಿ ಹಾಲಿಗೆ (ಶೇ.4.0 ಎಸ್.ನ್.ಎಫ್ ಶೇ.8.50) 29.02 ಆಗಿದ್ದು ಆಗಸ್ಟ್ 11 ರಿಂದ ನೀಡುವ ದರ 30.0 ರೂ. ಆಗಲಿದೆ. ಸಂಘದಿಂದ ಉತ್ಪಾದರಿಗೆ ಹಾಲಿ ನೀಡುತ್ತಿರುವ ದರ (ಶೇ. 4.0 ಎಸ್.ಎನ್.ಎಫ್. ಶೇ.8.50) ಪ್ರತಿ ಲೀಟರ್ ಹಾಲಿಗೆ 27.16 ರೂ. ಇದ್ದು, ಆಗಸ್ಟ್ 11 ರಿಂದ 28.20 ರೂ. ಹೆಚ್ಚಾಗಲಿದೆ.
READ | ಮಾಲತಿ ನದಿಯಲ್ಲೇ ಶವ ಸಾಗಿಸಿ ಅಂತ್ಯಸಂಸ್ಕಾರ! ಇದು ಹೃದಯ ಕಲಕುವ ಘಟನೆ
ಶಿಮುಲ್ ಅಧ್ಯಕ್ಷರು ಹೇಳಿದ್ದೇನು?
- ಹಾಲಿನ ಮಾರಾಟವನ್ನು ಅಂತರ ರಾಜ್ಯಮಟ್ಟದಲ್ಲಿ ವಿಸ್ತರಿಸುವ ಯೋಜನೆ ಹೊಂದಿದ್ದು, ದೆಹಲಿ ಮತ್ತು ಮಹಾರಾಷ್ಟ್ರಗಳಿಗೆ 1 ಲಕ್ಷ ಲೀ. ಹಾಲು ಸರಬರಾಜು ಮಾಡುವ ಕುರಿತು ಇದೇ ಆ.12 ರಂದು ಸಭೆ ನಡೆಸಲಿದ್ದೇವೆ. ಹಾಗೂ ಒಕ್ಕೂಟದ ಅಭಿವೃದ್ದಿ ಉದ್ದೇಶದಿಂದ ಹಲವಾರು ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡಿದ್ದೇವೆ.
- ಪ್ರಸ್ತುತ ಒಕ್ಕೂಟದ ವ್ಯಾಪ್ತಿಯಲ್ಲಿ 1347 ಸಹಕಾರ ಸಂಘಗಳು ಇದ್ದು ಪ್ರತಿ ದಿನ 7 ಲಕ್ಷ ಲೀಟಲ್ ಹಾಲು ಉತ್ಪಾದನೆಯಾಗುತ್ತಿದೆ. 60 ಸಾವಿರ ಹಸುಗಳ ವಿಮೆ ಗುರಿ ಹೊಂದಲಾಗಿದೆ. ಶಿವಮೊಗ್ಗ ಹಾಲಿನ ಡೇರಿ ಆವರಣದಲ್ಲಿ ಆಧುನಿಕ ಪ್ಯಾಕಿಂಗ್ ಯಂತ್ರೋಪಕರಣ ಅಳವಡಿಸುವ ಹಾಗೂ ಕಚ್ಚಾ ಹಾಲಿನ ಪ್ರಯೋಗಾಲಯ ಆಧುನೀಕರಣಗೊಳಿಸಲು ಯೋಜನೆ ರೂಪಿಸಲಾಗಿದೆ.
- ದಾವಣಗೆರೆ ಡೇರಿಯಲ್ಲಿ ದಿನವಹಿ 1.50 ಲಕ್ಷ ಲೀ. ಹಾಲು ಮತ್ತು 0.50 ಲಕ್ಷ ಕೆ.ಜಿ ಮೊಸರು ಉತ್ಪಾದನೆಗೆ ಅನುಕೂಲವಾಗುವಂತೆ 15.00 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಿಸಲು ಯೋಜನೆ ರೂಪಿಸಲಾಗಿದೆ.
- ತಡಗಣಿ ಶೀತಲೀಕರಣ ಕೇಂದ್ರದಲ್ಲಿ ಹಾಲಿನ ತಣಿಸುವಿಕೆ ಸಾಮಥ್ರ್ಯವನ್ನು ಹೆಚ್ಚಿಸಲು ನೂತನ 20.0 ಕೆಎಪಿಎಚ್ ಸಾಮಥ್ರ್ಯದ ಚಿಲ್ಲರ್ ಹಾಗೂ ಸ್ಟೋರೇಜ್ ಟ್ಯಾಂಕ್’ಗಳನ್ನು ಅಳವಡಿಸುವ ಪ್ರಕ್ರಿಯೆ ಜಾರಿಯಲ್ಲಿದೆ. ಹೊನ್ನಾಳಿ ಶೀತಲೀಕರಣ ಕೇಂದ್ರದಲ್ಲಿ ನೂತನ 20.0 ಕೆಎಲ್.ಪಿಎಚ್ ಸಾಮಥ್ರ್ಯದ ಚಿಲ್ಲರ್ ಅಳವಡಿಸುವ ಪ್ರಕ್ರಿಯೆ ಕೂಡ ಜಾರಿಯಲ್ಲಿದೆ ಹಾಗೂ ಹೊಸದುರ್ಗ ಪಟ್ಟಣದಲ್ಲಿ ನೂತನ ನಿವೇಶನ ಖರೀದಿಸಿ 60 ಕೆ.ಎಲ್ ಸಾಮಥ್ರ್ಯದ ಚಿಲ್ಲರ್ ಅಳವಡಿಸುವ ಪ್ರಕ್ರಿಯೆ ಜಾರಿಯಲ್ಲಿದೆ.
- ಆಜಾದಿ ಕ ಅಮೃತ ಮಹೋತ್ಸವ ಅಂಗವಾಗಿ ಎಲ್ಲ ಸಂಘಗಳಲ್ಲಿ ಮತ್ತು ಉತ್ಪಾದರ ಮನೆಗಳಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸಬೇಕೆಂದು ಇದೇ ಸಂದರ್ಭದಲ್ಲಿ ಅಧ್ಯಕ್ಷರು ಮನವಿ ಮಾಡಿದರು.
ಶಿಮುಲ್ ನಿರ್ದೇಶಕರು, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಎಸ್.ವಿ.ಯಲಿ, ಶಿಮುಲ್ ವ್ಯವಸ್ಥಾಪಕ ನಿರ್ದೇಶಕ ಬಸವರಾಜ್ ಇದ್ದರು.
https://suddikanaja.com/2022/02/28/shimul-gave-shivaratri-gift-to-shimoga-chitradurga-davanagere-farmers/