ಸುದ್ದಿ ಕಣಜ.ಕಾಂ | DISTRICT | 23 AUG 2022
ಶಿವಮೊಗ್ಗ: 2022ನೇ ಸಾಲಿನ ಗಣೇಶ ಹಬ್ಬದ ಪ್ರಯುಕ್ತ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪ್ರತಿಷ್ಠಾಪನೆಗೊಳ್ಳುವ ಗಣಪತಿ ಸಮಿತಿಯವರು ಪೊಲೀಸ್ ಇಲಾಖೆಯಿಂದ ಧ್ವನಿವರ್ಧಕ ಪರವಾನಗಿಯನ್ನು ಮೆಸ್ಕಾಂ ಇಲಾಖೆಯಿಂದ ತಾತ್ಕಾಲಿಕ ವಿದ್ಯುತ್ ಸಂಪರ್ಕ ಮತ್ತು ಮಹಾನಗರ ಪಾಲಿಕೆಯಿಂದ ಅನುಮತಿಯನ್ನು ಪಡೆಯುವುದು ಅವಶ್ಯಕವಿರುತ್ತದೆ.
ಆದ್ದರಿಂದ ವಿವಿಧ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಅನುಮತಿ ಪಡೆಯುವ ಕೆಲಸವನ್ನು ಸರಳಗೊಳಿಸುವ ಉದ್ದೇಶದಿಂದ ಮೂರು ಇಲಾಖೆಯ ಅಧಿಕಾರಿಗಳು ಒಂದೇ ಸ್ಥಳದಲ್ಲಿ ಲಭ್ಯವಿರುವಂತೆ ಏಕಗವಾಕ್ಷಿ (Single Window) ವ್ಯವಸ್ಥೆಯನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಈ ವ್ಯವಸ್ಥೆಯನ್ನು ಆಗಸ್ಟ್ 24ರಿಂದ ಪ್ರಾರಂಭಿಸಲಾಗುತ್ತಿದ್ದು, ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕಾರ್ಯ ನಿರ್ವಹಿಸುತ್ತದೆ.
READ | ಗಡಿಯಲ್ಲೇ ಹೊರ ರಾಜ್ಯಗಳ ಪಿಓಪಿ ಗಣೇಶನಿಗೆ ತಡೆ, ಪರಿಸರ ಸ್ನೇಹಿ ಹಬ್ಬಕ್ಕೆ ನೀಡಿದ ಸೂಚನೆಗಳಿವು
ಎಲ್ಲೆಲ್ಲಿ ಏಕಗವಾಕ್ಷಿ ವ್ಯವಸ್ಥೆ ಲಭ್ಯ?
ಈ ಕೆಳಕಂಡ ಸ್ಥಳಗಳಲ್ಲಿ ಏಕಗವಾಕ್ಷಿ (Single Window) ವ್ಯವಸ್ಥೆಯನ್ನು ಪ್ರಾರಂಭಿಸುತ್ತಿದ್ದು, ಗಣಪತಿ ಸಮಿತಿಯವರು ಇದರ ಅನುಕೂಲವನ್ನು ಪಡೆದುಕೊಳ್ಳಲು ಕೋರಲಾಗಿದೆ.
- ಶಿವಮೊಗ್ಗ ಪೊಲೀಸ್ ಉಪ ವಿಭಾಗ ಕಚೇರಿ, ಸಾಗರ ರಸ್ತೆ, ಶಿವಮೊಗ್ಗ
- ಮಹಾನಗರ ಪಾಲಿಕೆ ಕಚೇರಿ, ಶಿವಮೊಗ್ಗ
- ವಿನೋಬನಗರ ಪೊಲೀಸ್ ಠಾಣೆ ಆವರಣ, ಪೊಲೀಸ್ ಚೌಕಿ, ಶಿವಮೊಗ್ಗ
https://suddikanaja.com/2022/08/22/shimoga-dc-dr-r-selvamani-important-meeting-on-ganesh-festival/