ಸುದ್ದಿ ಕಣಜ.ಕಾಂ | 20 AUG 2022 | POWER CUT
ಶಿವಮೊಗ್ಗ: 2022-23ನೇ ಸಾಲಿಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
READ | ಶಿವಮೊಗ್ಗ ನಗರ, ಗ್ರಾಮಾಂತರ ಭಾಗಗಳಲ್ಲಿ ನಾಳೆ ಕರೆಂಟ್ ಇರಲ್ಲ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 12ರ ವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತರು ಇಲಾಖೆಯ ವೆಬ್ಸೈಟ್ www.bwcw.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಾಲತಾಣ www.bcwd.hostels@karnataka.gov ಅಥವಾ ಸಹಾಯವಾಣಿ ಸಂ. 080-65970006/ 08182-222129 ಗಳನ್ನು ಸಂಪರ್ಕಿಸಿ.