DC Grama Vastavya | ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯಕ್ಕೆ ಡೇಟ್ ಫಿಕ್ಸ್, ಯಾವ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ?

DC Grama Vastavya

 

 

ಸುದ್ದಿ ಕಣಜ.ಕಾಂ | DISTRICT | 2 SEP 2022
ಶಿವಮೊಗ್ಗ: ಜಿಲ್ಲಾಧಿಕಾರಿ‌ ಡಾ.ಆರ್.ಸೆಲ್ವಮಣಿ‌ ಅವರು ಸೆಪ್ಟೆಂಬರ್ 17ರಂದು ಬೆಳಗ್ಗೆ 11 ಗಂಟೆಗೆ ಸಾಗರ ತಾಲೂಕಿನ ಆನಂದಪುರ ಹೋಬಳಿಯ ಹೆಗ್ಗೋಡು(Heggodu) ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ.
‘ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ- ಕಂದಾಯ ಇಲಾಖೆ’ ಹೊಸ ಪರಿಕಲ್ಪನೆ ಪರಿಕಲ್ಪನೆಯೊಂದಿಗೆ ಪ್ರತಿ ಮೂರನೇ ಶನಿವಾರದಂದು ಗ್ರಾಮ ಭೇಟಿ ನೀಡಿ ವಾಸ್ತವ್ಯ ಹೂಡುವ ಬಗ್ಗೆ ಸರ್ಕಾರದ ನಿರ್ದೇಶನವಿದೆ. ಅದರಂತೆ, ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

READಶಿವಮೊಗ್ಗದಲ್ಲಿ 4 ದಿನ ಯೆಲ್ಲೋ ಅಲರ್ಟ್, ಧಾರಾಕಾರ ಮಳೆಯ ಮುನ್ಸೂಚನೆ

ಅಂದು ಬೆಳಗ್ಗೆ 11ಕ್ಕೆ ಹೆಗ್ಗೋಡು ಗ್ರಾಮ ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿ ಜಿಲ್ಲಾಧಿಕಾರಿ ಸೆಲ್ವಮಣಿ ಅವರು ಕಂದಾಯ ಮತ್ತು ಇತರೆ ಎಲ್ಲ ಇಲಾಖೆಯ ಅಧಿಕಾರಿ, ಸಿಬ್ಬಂದಿಯೊಂದಿಗೆ ಸಾರ್ವಜನಿಕರನ್ನು ಭೇಟಿ ಮಾಡಿ ಅಹವಾಲು ಆಲಿಸುವರು. ನಂತರ, ಕುಂದುಕೊರತೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು, ಹಳ್ಳಿ ವಾಸ್ತವ್ಯವನ್ನು ಹೂಡಲಿದ್ದಾರೆ.
ಪ್ರಯುಕ್ತ, ಹೆಗ್ಗೋಡು ಗ್ರಾಮದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ತಮ್ಮ ಗ್ರಾಮದಲ್ಲಿಯೇ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಲು ಹಾಗೂ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿನಂತಿಸಲಾಗಿದೆ.

https://suddikanaja.com/2021/10/17/dc-visit-to-gajanuru-village/

Leave a Reply

Your email address will not be published. Required fields are marked *

error: Content is protected !!