ಸುದ್ದಿ ಕಣಜ.ಕಾಂ | KARNATAKA | 03 SEP 2022
ಶಿವಮೊಗ್ಗ: ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 140 ಸೀಟುಗಳನ್ನು ಗೆಲ್ಲಿಸುವ ಗುರಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ನೀಡಿದ್ದಾರೆ. ಅದನ್ನು ಸಾಮೂಹಿಕ ಪ್ರಯತ್ನದ ಮೂಲಕ ಸಾಧಿಸಲು ಪ್ರಯತ್ನಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು.
READ | ಪುಣ್ಯಕೋಟಿ ರಾಯಭಾರಿಯಾಗಿ ಕಿಚ್ಚ ಸುದೀಪ್
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಎಲ್ಲರನ್ನೂ ಸೇರಿಸಿಕೊಂಡು ರಾಜ್ಯ ಪ್ರವಾಸ ಮಾಡಲಾಗುವುದು. ಪ್ರಚಾರಕ್ಕೆ ಮೋದಿ ಅವರು ಬರುವ ಭರವಸೆ ನೀಡಿದ್ದಾರೆ ಎಂದರು.
ಶಿವಮೊಗ್ಗದಲ್ಲಿ ಬೃಹತ್ ಸಮಾವೇಶ
ನರೇಂದ್ರ ಮೋದಿ ಅವರು ಮಂಗಳೂರಿಗೆ ಬಂದು ಹೋದ ಬಳಿಕ ರಾಜ್ಯದ ಕಾರ್ಯಕರ್ತರಲ್ಲಿ ಹೊಸ ಹುರುಪು ಬಂದಿದೆ. ಬರುವ ದಿನಗಳಲ್ಲಿ ಎಲ್ಲರೊಂದಿಗೆ ಚರ್ಚಿಸಿ ಎಲ್ಲರೂ ಒಪ್ಪಿಗೆ ನೀಡಿದರೆ ಶೀಘ್ರವೇ ದಿನಾಂಕ ನಿಗದಿಪಡಿಸಿ ಶಿವಮೊಗ್ಗದಲ್ಲಿ ಬಿಜೆಪಿ ಸಮಾವೇಶ ಏರ್ಪಡಿಸಲಾಗುವುದು. 1 ಲಕ್ಷ ಜನರನ್ನು ಈ ವೇಳೆ ಸೇರಿಸಲಾಗುವುದು. ಇಲ್ಲಿಗೆ ಮೋದಿ ಅವರನ್ನು ಕರೆಯಲಾಗುವುದು ಎಂದು ಹೇಳಿದರು.
Politics | ಬಿ.ಎಸ್.ಯಡಿಯೂರಪ್ಪ ಅವರನ್ನು ಮುಕ್ತಕಂಠದಿಂದ ಹೊಗಳಿದ ಕೆ.ಎಸ್.ಈಶ್ವರಪ್ಪ, ಕಾರಣವೇನು?