Umesh katti | ಅರಣ್ಯ ಸಚಿವ ಉಮೇಶ ಕತ್ತಿ ನಿಧನ, ಸಿಎಂ ಸಂತಾಪ

umesh katti

 

 

ಸುದ್ದಿ ಕಣಜ.ಕಾಂ | KARNATAKA | 07 SEP 2022
ಶಿವಮೊಗ್ಗ: ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳು, ಅರಣ್ಯ ಇಲಾಖೆ ಉಮೇಶ್ ಕತ್ತಿ (61) ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಇವರು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ರಾತ್ರಿ 10 ಗಂಟೆ ಹೊತ್ತಿನಲ್ಲಿ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಎಂ.ಎಸ್‌.ರಾಮಯ್ಯ ಆಸ್ಪತ್ರೆ ದಾಖಲಿಸಲಾಗಿದೆ. ‌ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ.
ಉಮೇಶ್ ಕತ್ತಿ‌ ಅವರ ಪಾರ್ಥೀವ ಶವವನ್ನು ಬುಧವಾರ ಬೆಳಗ್ಗೆ ಬೆಳಗಾವಿ ಕೊಂಡೊಯ್ಯಲಾಗುವುದು. ಘಟನೆಯ ಬಗ್ಗೆ ಮಾಹಿತಿ ಲಭ್ಯವಾಗಿದ್ದೇ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಸಿಎಂ ಟ್ವೀಟ್ ಮೂಲಕ ಸಂತಾಪ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕತ್ತಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಈ‌ ಬಗ್ಗೆ ಟ್ವೀಟ್ ಮಾಡಿರುವ ಅವರು ‘ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ,ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನದ’ ಎಂದು ಟ್ವೀಟ್ ಮಾಡಿದ್ದಾರೆ.

https://suddikanaja.com/2021/09/25/yathishwara-shivacharya-swamiji-no-more/

Leave a Reply

Your email address will not be published. Required fields are marked *

error: Content is protected !!