ಸುದ್ದಿ ಕಣಜ.ಕಾಂ | DISTRICT | 18 OCT 2022
ಶಿವಮೊಗ್ಗ(shivamogga): ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಅಹವಾಲುಗಳನ್ನು ಆಲಿಸಿದ ಸಂಸದ ಬಿ.ವೈ.ರಾಘವೇಂದ್ರ (BY Raghavendra) ಅವರು ಸಮಸ್ಯೆಗಳಿಗೆ ಪರಿಹಾರ ನೀಡುವ ಅಭಯ ನೀಡಿದರು.
VIDEO REPORT
ಸಂತ್ರಸ್ತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶೀಘ್ರವೇ ಸೂಕ್ತ ಪರಿಹಾರ ನೀಡಲಾಗುವುದು. ಯಾರೂ ಭಯಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.
READ | ಗಂಧ ಕಳ್ಳತನ ಮಾಡಿದ ಮೂವರಿಗೆ ಐದು ವರ್ಷ ಸಜೆ
ಇಲ್ಲಿ ಅಧಿಕಾರಿಗಳ ತಪ್ಪೂ ಇದೆ
ಸಂತ್ರಸ್ತರ ಪರವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿವೆ. ಯಾವುದೇ ಕಾರಣಕ್ಕೂ ಸಂತ್ರಸ್ತರ ಕೈಬಿಡುವುದಿಲ್ಲ. ನ್ಯಾಯಾಲಯವು ಶರಾವತಿ ಸಂತ್ರಸ್ತರ ಜಮೀನಿನ ಡಿನೋಟಿಫಿಕೇಷನ್ ಗೆ ಸಂಬಂಧಿಸಿದಂತೆ ಪರಿಸರವಾದಿ ಗಿರೀಶ್ ಆಚಾರ್ ಅವರು ಸಲ್ಲಿಸಿದ್ದ ಅರ್ಜಿಗೆ ರೈತರ ವಿರುದ್ಧವಾಗಿ ತೀರ್ಪು ನೀಡಿದೆ. ಇಲ್ಲಿ ಅಧಿಕಾರಿಗಳ ತಪ್ಪೂ ಇದೆ. ಇದೆಲ್ಲವನ್ನು ಸರಿಪಡಿಸಲಾಗುವುದು ಎಂದು ಭರವಸೆ ನೀಡಿದರು.
ಈ ಹಿಂದೆಯೇ ಸಮಸ್ಯೆ ಬಗೆಹರಿಸಬೇಕಿತ್ತು
1980 ಒಳಗೆಯೇ ಅರಣ್ಯ ಸಂರಕ್ಷಣೆ ಕಾಯ್ದೆ ಅಡಿ ಸಂತ್ರಸ್ತರ ಸಮಸ್ಯೆಯನ್ನು ಬಗೆಹರಿಸಬಹುದಿತ್ತು. ಆದರೆ, ಹಾಗೇ ಮಾಡಲಿಲ್ಲ. ಸರ್ಕಾರ ಸಂತ್ರಸ್ತರ ಪರವಾಗಿ ತೀರ್ಮಾನ ತೆಗೆದುಕೊಂಡರೂ ಅದನ್ನು ಗೆಜೆಟ್ ಗೆ ತರಲಿಲ್ಲ. 2016ರಲ್ಲಿ ಡಿನೋಟಿಫೈ ಮಾಡಿತ್ತು. ಆದರೆ, ಕೇಂದ್ರ ಸರ್ಕಾರದ ಅನುಮತಿ ಪಡೆಯದೇ ಇರುವುದರಿಂದ ಈಗ ಡಿನೋಟಿಫೀಕೇಷನ್ ರದ್ದಾಗಿದೆ ಎಂದರು.
ಈಗಿನ ಅಧಿಕಾರಿಗಳ, ಆಗಿನ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ಈ ಆದೇಶ ಬಂದಿದ್ದು, ಇದಕ್ಕಾಗಿ ರೈತರು ಭಯಪಡುವ ಅಗತ್ಯವಿಲ್ಲ. ಈ ಸಂಬಂಧ ಬುಧವಾರ ಬೆಳಗ್ಗೆಯೇ ಕೇಂದ್ರ ಸಚಿವರೊಂದಿಗೆ ಮಾತನಾಡುವೆ ಎಂದು ಹೇಳಿದರು.
ರೈತರ ಈ ಸಂಕಷ್ಟಕ್ಕೆ ಎಲ್ಲ ಸರ್ಕಾರಗಳ ತಪ್ಪಿದೆ
ರೈತರಾದ ಸುಬ್ಬಣ್ಣ, ಸುಧಾಕರ್ ಮತ್ತು ಕೃಷ್ಣಮೂರ್ತಿ ಮಾತನಾಡಿ, ಸಂತ್ರಸ್ತರು ಹಲವು ವರ್ಷಗಳಿಂದ ಎದುರಿಸಿಕೊಂಡು ಬಂದಿರುವ ತೊಡಕನ್ನು ಬಗೆಹರಿಸುವಲ್ಲಿ ಎಲ್ಲ ಸರ್ಕಾರಗಳು ವಿಫಲವಾಗಿವೆ. ಜನಪ್ರತಿನಿಧಿಗಳು ಬರೀ ಆಶ್ವಾಸನೆಗಳನ್ನು ನೀಡದೇ ಸಮಸ್ಯೆಗೆ ಪರುಹಾರ ಕಂಡುಕೊಳ್ಳಲು ಎಲ್ಲ ಪಕ್ಷದವರು ಸಹಕಾರ ನೀಡಬೇಕು.
ಶಾಸಕ ಕೆ.ಬಿ. ಅಶೋಕ್ ನಾಯ್ಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Police raid | ಶಿವಮೊಗ್ಗದ ಹಲವೆಡೆ ಪೊಲೀಸರ ದಿಢೀರ್ ಕಾರ್ಯಾಚರಣೆ, ರಿಪೋರ್ಟ್ ಪಾಸಿಟಿವ್ ಇದ್ರೆ ಅಂದರ್, ಕಾರಣವೇನು?