ಸುದ್ದಿ ಕಣಜ.ಕಾಂ | DISTRICT | 20 OCT 2022
ಶಿವಮೊಗ್ಗ(Shivamogga): ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರಾಮ ಮಂದಿರ (Rama Mandir) ಸ್ಫೋಟಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಸಂಚು ರೂಪಿಸುವುದು ಆಘಾತಕಾರಿ ವಿಚಾರವಾಗಿದೆ ಎಂದು ಶಾಸಕ ಕೆ.ಎಸ್.ಈಶ್ವರಪ್ಪ (KS Eshwarappa) ಹೇಳಿದರು.
READ | ಮನೆಯಲ್ಲಿ ಕಳ್ಳತನ ಕೇಸ್ನಲ್ಲಿ ಇಬ್ಬರು ಅಂದರ್
ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣ ಹಿಂದೂ ಸಮಾಜದ ಬಹುದಿನಗಳ ಕನಸಾಗಿದೆ. ಆದರೆ, ಇಂತಹ ಶ್ರದ್ಧಾ ಭಕ್ತಿ ಕೇಂದ್ರದ ಸ್ಫೋಟಕ್ಕೆ ಸಂಚು ರೂಪಿಸಿರುವ ವಿಚಾರ ಬೆಳಕಿಗೆ ಬಂದಿದೆ. ಇದು ತಿಳಿದು ಆಘಾತವಾಗಿದೆ. ಇದನ್ನು ಎಲ್ಲ ಪಕ್ಷಗಳೂ ಖಂಡಿಸಬೇಕು ಎಂದರು.
ಮಲ್ಲಿಕಾರ್ಜುನ ಖರ್ಗೆ ಹಿರಿಯ ರಾಜಕಾರಣಿ. ಅವರನ್ನು ಎಐಸಿಸಿ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದನ್ನು ನಾನು ಸ್ವಾಗತಿಸುತ್ತೇನೆ. ಅವರ ನೇತೃತ್ವದಲ್ಲಿ ದೇಶದಲ್ಲಿ ಕಾಂಗ್ರೆಸ್ ಅಧಿಕೃತ ವಿರೋಧ ಪಕ್ಷವಾಗಿ ಬರುವ ದಿಕ್ಕಿನಲ್ಲಾದರೂ ಯಶಸ್ವಿಯಾಗಲಿ. ಗಾಂಧಿ ಕುಟುಂಬಕ್ಕೆ ರಬ್ಬರ್ ಸ್ಟ್ಯಾಂಪ್ ಆಗದೇ, ಸ್ವತಂತ್ರವಾಗಿ ಅಧಿಕಾರ ನಡೆಸಲಿ.
| ಕೆ.ಎಸ್. ಈಶ್ವರಪ್ಪ, ಶಾಸಕ
ಚೇತನ್ ಯಾರೆಂದೇ ನನಗೆ ಗೊತ್ತಿಲ್ಲ
ಕಾಂತಾರ ಸಿನಿಮಾ ಬಗ್ಗೆ ಹೇಳಿಕೆ ನೀಡಿರುವ ನಟ ಚೇತನ್ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಈಶ್ವರಪ್ಪ, “ಚೇತನ್ ಯಾರೆಂದೇ ನನಗೆ ಗೊತ್ತಿಲ್ಲ. ಅವರ ಚಿತ್ರಗಳನ್ನೇ ನಾನು ನೋಡಿಲ್ಲ. ಹಿಂದೂ ಧರ್ಮದ ಬಗ್ಗೆ ಮಾತನಾಡಲು ಅವನಾರು?” ಎಂದರು.