ಸುದ್ದಿ ಕಣಜ.ಕಾಂ | DISTRICT | 29 OCT 2022
ಭದ್ರಾವತಿ: ಬೈಪಾಸ್(Bypass)ನಲ್ಲಿ ಕಣ್ಣಿಗೆ ಖಾರದ ಪುಡಿ ಎರಚಿ ಬಿಯರ್ ಬಾಟಲಿಯಿಂದ ವ್ಯಾಪಾರಿಯೊಬ್ಬರ ಮೇಲೆ ಹಲ್ಲೆ (attack) ಮಾಡಿರುವ ಘಟನೆ ಬೈಪಾಸ್ ನಲ್ಲಿ ಗುರುವಾರ ರಾತ್ರಿ ನಡೆದಿದೆ.
READ | ಚಿನ್ನಾಭರಣ ಪ್ರಿಯರಿಗೆ ಗುಡ್ ನ್ಯೂಸ್, ಆಭರಣ ಚಿನ್ನದ ಬೆಲೆಯಲ್ಲಿ ಇಳಿಕೆ
ಡ್ರೈಫ್ರೂಟ್ ವ್ಯಾಪಾರ ಮಾಡುತ್ತಿದ್ದ ನರೇಂದ್ರ ಎಂಬುವವರು ಗಾಯಗೊಂಡಿದ್ದಾರೆ. ಇವರು ರಸ್ತೆ ಪಕ್ಕ ಮೂತ್ರ ವಿಸರ್ಜನೆ ಮಾಡುತ್ತಿದ್ದಾಗ ದುಷ್ಕಮಿಗಳು ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಗಾಯಗೊಂಡ ನರೇಂದ್ರ ಅವರನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಇವರು ಮನೆಯಿಂದ ಪೆಟ್ರೋಲ್ ಬಂಕ್ ಸಮೀಪವಿರುವ ಬೀಡಾ ಅಂಗಡಿಗೆ ತೆರಳಿದ್ದರು. ಮನೆಗೆ ವಾಪಸ್ ಬರುವಾಗ ಘಟನೆ ಸಂಭವಿಸಿವೆ. ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://suddikanaja.com/2022/10/29/eye-donated-by-parents-at-rippanpete/