ಸುದ್ದಿ ಕಣಜ.ಕಾಂ | DISTRICT | 15 OCT 2022
ಶಿವಮೊಗ್ಗ: ಅ.11 ರ ಅಂತರರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಪ್ರಯುಕ್ತ ಶಿವಮೊಗ್ಗದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಎಸ್.ಶಾಲಿನಿ ಅವರು ‘ಒಂದು ದಿನದ ಯುವ ಕ್ರೀಡಾಧಿಕಾರಿ’ಯಾಗಿ ಆಯ್ಕೆಯಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಸಹಾಯಕ ನಿರ್ದೇಶಕರ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸಿದರು.
ರಾಜ್ಯ ಸರ್ಕಾರ ಅಂತರರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಪ್ರಯುಕ್ತ 18 ರಿಂದ 23 ವಯೋಮಿತಿಯ ಯುವತಿಯರಿಗೆ ‘ಒಂದು ದಿನದ ಯುವ ಕ್ರೀಡಾಧಿಕಾರಿ’ಯಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಕಚೇರಿಯಲ್ಲಿ ಕಾರ್ಯ ನಿರ್ವಹಿಸಲು ಆನ್ಲೈನ್ ಅರ್ಜಿ ಕರೆದಿದ್ದು ಅದರಂತೆ ಅರ್ಜಿ ಸಲ್ಲಿಸಿ, ಆಯ್ಕೆಯಾದ ಶಾಲಿನಿ ಅವರು ನೆಹರೂ ಕ್ರೀಡಾಂಗಣದ ಮುಖ್ಯದ್ವಾರದಲ್ಲಿರುವ ಕ್ರೀಡಾ ಇಲಾಖೆಯಲ್ಲಿ ಅ.11 ರಂದು ಒಂದು ದಿನದ ಯುವ ಕ್ರೀಡಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.
READ | ಶಿವಮೊಗ್ಗ ಘನತ್ಯಾಜ್ಯ ವಿಲೇಗೆ ಜಿಲ್ಲಾಡಳಿತ ಡೆಡ್ ಲೈನ್
ಕ್ರೀಡಾಧಿಕಾರಿಯಾಗಿ ಸಂತಸ ವ್ಯಕ್ತಪಡಿಸಿದ ಶಾಲಿನಿ
ಸಹಾಯಕ ನಿರ್ದೇಶಕರ ಬಳಿ ಇಲಾಖೆಯ ಕಾರ್ಯವೈಖರಿ, ಕ್ರೀಡಾ ಚಟುವಟಿಕೆ ವಿಭಾಗ, ಕಾರ್ಯಕ್ರಮಗಳು, ಅದರ ಸಂಘಟನೆ, ಅನುದಾನ, ಒಳಾಂಗಣ, ಹೊರಾಂಗಣ ಕ್ರೀಡಾಂಗಣಗಳಲ್ಲಿನ ಸೌಕರ್ಯಗಳು, ನಿರ್ವಹಣೆ, ವ್ಯಾಯಾಮ ಶಾಲೆ, ಕ್ರೀಡಾ ಸಂಕೀರ್ಣದಲ್ಲಿನ ಈಜು ಕೊಳ, ಟೆನಿಸ್ ಅಂಗಣ, ಸ್ಕೇಟಿಂಗ್ ಅಂಗಣ, ಕ್ರೀಡಾಂಗಣ ಸದಸ್ಯತ್ವ ಶುಲ್ಕ, ಸಿಬ್ಬಂದಿ ವಿವರ ಕುರಿತು ಹಾಗೂ ಜಿಲ್ಲಾ ಕ್ರೀಡಾ ಶಾಲೆ/ ವಸತಿ ನಿಲಯದ ಕುರಿತು ಸವಿಸ್ತಾರವಾಗಿ ತಿಳಿದುಕೊಂಡರು.
ನಂತರ ಜಿಲ್ಲಾ ಮಟ್ಟದ ವಾಲಿಬಾಲ್, ವಿಭಾಗ ಮಟ್ಟದ ಫುಟ್ಬಾಲ್ ಹಾಗೂ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜಿನ ಕರಾಟೆ ಕ್ರೀಡಾಕೂಟದಲ್ಲಿ ಭಾಗವಹಿಸಿದರು. ಇಲಾಖೆ ಕುರಿತಾದ ಸಂಪೂರ್ಣ ಮಾಹಿತಿ ಪಡೆದುಕೊಂಡ ಅವರು ಯುವ ಕ್ರೀಡಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಸಂತಸ ವ್ಯಕ್ತಪಡಿಸಿದರು. ಈ ವೇಳೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಇದ್ದರು.
https://suddikanaja.com/2022/10/14/karnataka-arecanut-task-force-meeting-at-bengaluru-amd-important-decision-taken-on-bhutan-arecanut-import/