ಸುದ್ದಿ ಕಣಜ.ಕಾಂ ಶಿವಮೊಗ್ಗ
Shivamogga: 2022ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ನವೆಂಬರ್ 6ರಂದು ನಗರದಲ್ಲಿ ನಡೆಯಲಿದ್ದು ಪರೀಕ್ಷೆಗೆ ಬರುವ ಪರೀಕ್ಷಾರ್ಥಿಗಳು ಪ್ರವೇಶ ಪತ್ರದ ಜೊತೆ ಕಡ್ಡಾಯವಾಗಿ ಆಧಾರ್, ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್ ಇತರೆ ಯಾವುದಾದರೂ ಗುರುತಿನ ಚೀಟಿಯನ್ನು ತರಬೇಕು ಎಂದು ಡಿಡಿಪಿಐ ತಿಳಿಸಿದ್ದಾರೆ.
READ | ಶಿವಮೊಗ್ಗದ 22 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ ಟಿಇಡಿ ಪರೀಕ್ಷೆ, ಡಿಸಿ ನೀಡಿರುವ ಸೂಚನೆಗಳೇನು?
22 ಕೇಂದ್ರಗಳಲ್ಲಿ ಪರೀಕ್ಷೆ
ಪರೀಕ್ಷೆಯ ಮೊದಲ ಅಧಿವೇಶನಕ್ಕೆ 4,662 ಅಭ್ಯರ್ಥಿಗಳು, 2ನೇ ಅಧಿವೇಶನಕ್ಕೆ 6,724 ಅಭ್ಯರ್ಥಿಗಳು ಹಾಜರಾಗಲಿದ್ದಾರೆ. ಒಟ್ಟು 22 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆವರೆಗೆ ಮತ್ತು ಮಧ್ಯಾಹ್ನ 2 ರಿಂದ 4.30 ರವರೆಗೆ ಪರೀಕ್ಷೆಗಳು ನಡಯುತ್ತದೆ. ಪರೀಕ್ಷಾ ಅವಧಿಯಲ್ಲಿ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿಗಳು ಘೋಷಿಸಿರುತ್ತಾರೆಂದು ಹೇಳಿದ್ದಾರೆ.