ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ವಿಚಾರಣೆಯ ಹಂತದಲ್ಲಿ ಬಾಕಿ ಇದ್ದ ವಿವಿಧ ಸ್ವರೂಪದ 7,852 ಪ್ರಕರಣಗಳನ್ನು ಹಾಗೂ 39,053 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಒಟ್ಟು 46,905 ರಾಜಿ ಸಂಧಾನ ಮಾಡಿಸುವ ಮೂಲಕ ಇತ್ಯರ್ಥಪಡಿಸಲಾಯಿತು.
ಜಿಲ್ಲೆಯ ಹಲವೆಡೆ ಪೀಠ
ಪ್ರಕರಣಗಳನ್ನು ರಾಜಿ ಮಾಡಿಸಲು ಶಿವಮೊಗ್ಗ ನಗರದಲ್ಲಿ 15 ಪೀಠಗಳನ್ನು, ಭದ್ರಾವತಿಯಲ್ಲಿ 7 ಪೀಠ, ಹೊಸನಗರದಲ್ಲಿ 2 ಪೀಠ, ಸಾಗರದಲ್ಲಿ 4 ಪೀಠ, ಶಿಕಾರಿಪುರದಲ್ಲಿ 3 ಪೀಠ, ಸೊರಬದಲ್ಲಿ 2 ಪೀಠ ಹಾಗೂ ತೀರ್ಥಹಳ್ಳಿಯಲ್ಲಿ 4 ಪೀಠಗಳನ್ನು ರಚಿಸಲಾಗಿತ್ತು. ಲೋಕ ಅದಾಲತ್ ನಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರ ಮಾರ್ಗದರ್ಶನದಲ್ಲಿ ವಿವಿಧ ಪ್ರಕರಣಗಳನ್ನು ರಾಜಿ ಸಂಧಾನ ಮಾಡಿಸಲಾಯಿತು.
ಲೋಕ ಅದಾಲತ್ನಲ್ಲಿ ಜಿಲ್ಲೆಯ ಎಲ್ಲ ನ್ಯಾಯಾಧೀಶರು, ವಿವಿಧ ವಿಮೆ ಕಂಪನಿಯ ಹಾಗೂ ಬ್ಯಾಂಕ್ ಅಧಿಕಾರಿಗಳು, ವಿಮೆ ಕಂಪನಿಯ ಹಾಗೂ ಬ್ಯಾಂಕ್ನ ಪ್ಯಾನಲ್ ವಕೀಲರುಗಳು, ಅರ್ಜಿದಾರರ ಪರ ವಕೀಲರುಗಳು ಹಾಗೂ ಕಕ್ಷಿದಾರರು ಸಕ್ರಿಯವಾಗಿ ಭಾಗವಹಿಸಿದ್ದರು.