ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಗೊಂದು ಗೋಶಾಲೆ (Goshale) ಯೋಜನೆಯಡಿ ಜಿಲ್ಲೆಗೆ 1 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಪಶುಪಾಲನಾ ಇಲಾಖೆ ಉಪನಿರ್ದೇಶಕ ಶಿವಯೋಗಿ ಎಲಿ ತಿಳಿಸಿದರು.
ಶುಕ್ರವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನೆ ಹಾಗೂ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.
READ | 53 ಸಾವಿರದ ಗಡಿ ದಾಟಿದ ಚಿನ್ನ! ಇಂದಿನ ಚಿನ್ನ, ಬೆಳ್ಳಿಯ ಬೆಲೆ ಎಷ್ಟು?
ಈಗಾಗಲೇ 34 ಲಕ್ಷ ರೂ. ವೆಚ್ಚದಲ್ಲಿ ಶೆಡ್ ಮತ್ತು ಶೆಲ್ಟರ್ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ. ಈ ಗೋಶಾಲೆಯಲ್ಲಿ 100 ಗೋವುಗಳಿಗೆ ವ್ಯವಸ್ಥೆ ಕಲ್ಪಿಸಲಾಗುವುದು. ಇನ್ನುಳಿದಂತೆ ಜಿಲ್ಲೆಯಲ್ಲಿ 12 ಗೋಶಾಲೆಗಳಿದ್ದು, 7 ಗೋಶಾಲೆಗಳಿಗೆ ಸಬ್ಸಿಡಿಯನ್ನು ಒದಗಿಸಲಾಗುತ್ತಿದೆ ಎಂದರು.
ಚರ್ಮಗಂಟು ರೋಗದಿಂದ 100 ಜಾನುವಾರ ಸಾವು
ಜಿಲ್ಲೆಯ ಶಿಕಾರಿಪುರ ಹಾಗೂ ಸೊರಬ ಭಾಗದಲ್ಲಿ ಕಾಣಿಸಿಕೊಂಡಿದ್ದ ಜಾನುವಾರುಗಳ ಚರ್ಮಗಂಟು ರೋಗ ಬಹುತೇಕ ನಿಯಂತ್ರಣದಲ್ಲಿದೆ ಎಂದು ತಿಳಿಸಿದರು.
ಚರ್ಮಗಂಟು ರೋಗದಿಂದಾಗಿ ಸುಮಾರು 100 ಜಾನುವಾರುಗಳು ಸಾವಿಗೀಡಾಗಿದ್ದು, ಜಾನುವಾರುಗಳ ಸಾಗಾಣಿಕೆ ಹಾಗೂ ಜಾತ್ರೆಯನ್ನು ನಿರ್ಬಂಧಿಸಿದ ಕಾರಣ ರೋಗ ಹತೋಟಿಗೆ ಬಂದಿದೆ. ಕಾಲುಬಾಯಿ ರೋಗ ಲಸಿಕೆ ಅಭಿಯಾನ ಜಿಲ್ಲೆಯಲ್ಲಿ ಡಿಸೆಂಬರ್ 7ರವರೆಗೆ ನಡೆಯಲಿದೆ ಎಂದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಡಿ.ಪ್ರಕಾಶ್, ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ, ಎಲ್ಲ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.