ಸುದ್ದಿ ಕಣಜ.ಕಾಂ ಬೆಂಗಳೂರು
BENGALURU: ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 30 ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀ ಕರಿಸಲು ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಉಪಸ್ಥಿತರಿದ್ದ ಸಂಪುಟದ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು, ಬಹಳ ದಿನಗಳಿಂದ ಬೇಡಿಕೆಯಾಗಿಯೇ ಉಳಿದಿದ್ದ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದೆ.
READ | ಅಡಿಕೆ ಎಲೆಚುಕ್ಕೆ ರೋಗಕ್ಕೆ ಬೆಳೆಗಾರರು ತತ್ತರ, ಶೇ.20-25ರಷ್ಟು ಇಳುವರಿ ಖೋತಾ, ಎಲ್ಲೆಲ್ಲಿ ರೋಗ ಪತ್ತೆ?
ಬಜೆಟ್’ನಲ್ಲಿ ಘೋಷಿಸಲಾಗಿತ್ತು
2022-23ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದಲ್ಲಿ ಹೆಚ್ಚಿನ ಕಾರ್ಯ ಒತ್ತಡವಿರುವ ಒಟ್ಟು 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 1000 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಉನ್ನತೀಕರಿಸುವ ಯೋಜನೆಯನ್ನು ಘೋಷಿಸಿದ್ದರು.
ಈ ಯೋಜನೆಯ ಲಾಭ ತಾಲೂಕಿನ ಜನತೆಗೆ ಪಡೆದುಕೊಳ್ಳಲು, ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ವಿಶೇಷ ಮುತುವರ್ಜಿ ವಹಿಸಿದ್ದರು.
ತಾಲೂಕಿನ ಜನತೆಯ ಬಹಳ ದಿನಗಳ ಬೇಡಿಕೆಯನ್ನು ಈಡೇರಿಸಿದ, ಬೊಮ್ಮಾಯಿ ಅವರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಕೃತಜ್ಞತೆ ಸಲ್ಲಿಸಿದ್ದಾರೆ.