ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಗುಜರಾತ್ ಚುನಾವಣೆ ಬಳಿಕ ಸಚಿವ ಸಂಪುಟ ಸಭೆ ವಿಸ್ತರಣೆಯ ಬಗ್ಗೆ ನಿರ್ಧಾರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basawaraj Bommai) ತಿಳಿಸಿದರು.
ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗುಜರಾತ್ ಚುನಾವಣೆ ಬಳಿಕ ಕೇಂದ್ರ ನಾಯಕರನ್ನು ಭೇಟಿ ಮಾಡುವೆ. ಸಂಪುಟ ವಿಸ್ತರಣೆಯ ಬಗ್ಗೆ ಚರ್ಚಿಸುವೆ ಎಂದರು.
READ | 31 ಗೋವುಗಳನ್ನು ದತ್ತು ಪಡೆದ ಚಿತ್ರನಟ ಸುದೀಪ್
ಶರಾವತಿ ಮುಳುಗಡೆ ಸಂತ್ರಸ್ತರ ಭೂ ಹಕ್ಕಿನ ಬಗ್ಗೆ ಜಿಲ್ಲಾಧಿಕಾರಿ ಅವರಿಗೆ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಸಮೀಕ್ಷೆ ಬಳಿಕ ಡಿಸೆಂಬರ್ ಮೂರನೇ ವಾರದೊಳಗೆ ವರದಿ ಪಡೆಯುವೆ. ಬಳಿಕ ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ಹೇಳಿದರು.
ಮುಳುಗಡೆ ಸಂತ್ರಸ್ತರು ಭಯ ಪಡುವ ಅಗತ್ಯವಿಲ್ಲ. ಅವರ ಪರವಾಗಿ ಸರ್ಕಾರ ನಿಲ್ಲಲಿದೆ. ತೊಂದರೆ ಆಗದಂತೆ ಗಮನ ಹರಿಸಲಾಗುವುದು ಎಂದರು.
ಎಲೆಚುಕ್ಕೆ ರೋಗದ ಬಗ್ಗೆ ಈಗಾಗಲೇ ಸಮಿತಿ ರಚಿಸಲಾಗಿದೆ. ಭಾನುವಾರ ತೀರ್ಥಹಳ್ಳಿಗೂ ಭೇಟಿ ನೀಡಲಿದ್ದು, ಆಗ ತೋಟಕ್ಕೆ ಹೋಗಿ ಪರಿಸ್ಥಿತಿಯನ್ನು ಅವಲೋಕನ ಮಾಡುವೆ ಎಂದರು.