ಸುದ್ದಿ ಕಣಜ.ಕಾಂ | POLITICAL NEWS
ಶಿವಮೊಗ್ಗ(shivamogga): ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಪಕ್ಷಕ್ಕೆ ಸೇರುವಂತೆ 50 ಕೋಟಿ ರೂಪಾಯಿ ಆಮೀಷ ಒಡ್ಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಆರೋಪಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ಶಾಸಕ ಕೆ.ಎಸ್.ಈಶ್ವರಪ್ಪ(KS Eshwarappa), ‘ಸಂಗಮೇಶ್ವರ್ ಬೆಲೆ ಕೇವಲ 50 ಕೋಟಿಯೇ ಕನಿಷ್ಠ 500 ಕೋಟಿಯಾದರೂ ಬೇಡವೇ? ಡಿಕೆಶಿಗೆ ಶಾಸಕರ ಬೆಲೆ ಗೊತ್ತಿಲ್ಲ. ನಾನು ಮಾಡಿದ್ದು 500 ಕೋಟಿ ಆಫರ್ ಎಂದು ವ್ಯಂಗ್ಯವಾಡಿದರು.
ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ವಿಶೇಷ ಸಮಾವೇಶವನ್ನು ಕಲಬುರಗಿಯಲ್ಲಿ ಆಯೋಜಿಸಿದೆ. ಇದಕ್ಕಾಗಿ ಎಲ್ಲ ಸಿದ್ಧತೆಗಳನ್ನು ಸಹ ಮಾಡಿಕೊಳ್ಳಲಾಗಿದೆ.
| ಕೆ.ಎಸ್.ಈಶ್ವರಪ್ಪ, ಶಾಸಕ
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಅವರು ಕೋಮುಗಲಭೆಗೆ ಈಶ್ವರಪ್ಪ ಕಾರಣ ಎಂದು ಟೀಕಿಸಿದ್ದಾರೆ. ಅವರ ಹೇಳಿಕೆ ಆಶ್ಚರ್ಯ ತಂದಿದೆ. ಆದರೆ, ಅವರಿಗೆ ನಾನು ಉತ್ತರ ಕೊಡುವ ಅಗತ್ಯ ಇಲ್ಲ’ ಎಂದರು.
READ | ಒಕ್ಕಲಿಗರ ಮೀಸಲಾತಿಯಲ್ಲಿನ ಗೊಂದಲ ನಿವಾರಣೆ ಮಾಡುವುದಾಗಿ ಯಡಿಯೂರಪ್ಪ ಭರವಸೆ
ಬಿಜೆಪಿಯವರಿಗೆ ಹಿಂದುಳಿದವರ ಬಗ್ಗೆ ಪ್ರೀತಿ ಇದ್ದರೆ ಈಶ್ವರಪ್ಪನವರನ್ನೇ ಮುಖ್ಯಮಂತ್ರಿಯನ್ನಾಗಿ ಮಾಡಬೇಕಿತ್ತು. ಏಕೆ ಮಾಡಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನನ್ನ ಮೇಲಿನ ಪ್ರೀತಿಗೆ ಧನ್ಯವಾದ. ಆದರೆ ನನ್ನನ್ನೇ ಮುಖ್ಯಮಂತ್ರಿ ಮಾಡಬೇಕು ಎನ್ನುವ ಅವರ ವ್ಯಂಗ್ಯ ಸರಿಯಲ್ಲ. ಪ್ರಧಾನಿ ಮೋದಿಯವರು ಕೂಡ ಹಿಂದುಳಿದವ ವರ್ಗದವರು ಎಂಬ ಪ್ರಜ್ಞೆ ಅವರಿಗಿರಲಿ. ಹಾಗೂ ಸಿದ್ದರಾಮಯ್ಯ ಈ ಜನ್ಮದಲ್ಲಿ ಮುಖ್ಯಮಂತ್ರಿ ಆಗಲು ಸಾಧ್ಯವೇ ಇಲ್ಲ ಎಂದು ಹೇಳಿದರು.
ಕಾಂಗ್ರೆಸ್ ಭ್ರಷ್ಟಾಚಾರ ಬಯಲು ಮಾಡುವೆವು
ಕಾಂಗ್ರೆಸ್ ನವರು ಬಿಜೆಪಿಯವರು ಲಂಚ ಪಡೆಯುತ್ತಿದ್ದಾರೆ ಎಂದು ದಾಖಲೆ ಇಲ್ಲದೆ ಹೇಳುತ್ತಿದ್ದಾರೆ. ಆದರೆ, ನಾವು ಹಾಗಲ್ಲ. ದಾಖಲೆ ಇಟ್ಟುಕೊಂಡು ಮಾತನಾಢುತ್ತೇವೆ. ಈಗಾಗಲೇ ನಮ್ಮ ಪಕ್ಷದ ಎನ್ .ಆರ್ ರಮೇಶ್ ಅವರು, ಸಿದ್ದರಾಮಯ್ಯ 1.30 ಕೋಟಿ ಲಂಚ ತೆಗೆದುಕೊಂಡ ಬಗ್ಗೆ ದಾಖಲೆ ಸಮೇತ ಬಹಿರಂಗ ಪಡಿಸಿದ್ದಾರೆ. ಕಾಂಗ್ರೆಸ್ ಭಷ್ಟಾಚಾರಗಳನ್ನೆಲ್ಲ ಬಯಲು ಮಾಡುತ್ತೇವೆ ಎಂದು ತಿಳಿಸಿದರು.
ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್, ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್. ಚನ್ನಬಸಪ್ಪ, ಉಪ ಮೇಯರ್ ಲಕ್ಷ್ಮೀಶಂಕರ್ ನಾಯ್ಕ್ ಉಪಸ್ಥಿತರಿದ್ದರು.
READ | ಶಿವಮೊಗ್ಗದ ಟಾಪ್ 10 ಸುದ್ದಿಗಳು, ಜಿಲ್ಲೆಯ ವಿವಿಧ ಬೆಳವಣಿಗೆಗಳ ಮಾಹಿತಿ ಇಲ್ಲಿದೆ