Mangalore blast | ಮಂಗಳೂರು ಆಟೋ ರಿಕ್ಷಾ ಬ್ಲಾಸ್ ಕೇಸ್, ಶಿವಮೊಗ್ಗದಲ್ಲಿ ನಾಲ್ಕು ಕಡೆಗಳಲ್ಲಿ ಪೊಲೀಸರ ದಾಳಿ

police

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮಂಗಳೂರು ಆಟೋ ರಿಕ್ಷಾದಲ್ಲಿ ಕುಕ್ಕರ್ ಸ್ಫೋಟ ಪ್ರಕರಣದ ಬೆನ್ನಲ್ಲೇ ಶಿವಮೊಗ್ಗ ಪೊಲೀಸರು ಸಕ್ರಿಯರಾಗಿದ್ದು, ಯುಎಪಿಎ (ಕಾನೂನು ಬಾಹಿರ ಚಟುವಟಿಕೆಗಳ (ತಡೆ) ತಿದ್ದುಪಡಿ) ಕಾಯ್ದೆ ಹೊಂದಿರುವ ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

READ | ಕ್ರೀಡಾ ಇಲಾಖೆಯಲ್ಲಿ ತರಬೇತುದಾರರ ನೇಮಕಾತಿ, ಯಾವ್ಯಾವ ಜಿಲ್ಲೆಗಳಲ್ಲಿ ಎಷ್ಟು ಹುದ್ದೆ? 

ತೀರ್ಥಹಳ್ಳಿ ತಾಲೂಕಿನ ನಾಲ್ಕು ಕಡೆಗಳಲ್ಲಿ ಸೋಮವಾರ ಬೆಳಗ್ಗೆ ಪೊಲೀಸರು ದಾಳಿ ನಡೆಸಿದ್ದು, ಮನೆಗಳನ್ನು ಪರಿಶೀಲಿಸಲಾಗಿದೆ. ಮಂಗಳೂರು ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ದಾಳಿ ನಡೆಸಲಾಗಿದೆ. ಸಾಜಿದ್ ಮತ್ತು ಶಾರೀಕ್ ಸಂಬಂಧಿಕರ ಮನೆಗಳಲ್ಲೂ ಪರಿಶೀಲನೆ ಮಾಡಲಾಗಿದೆ.
ಆಗುಂಬೆ ಠಾಣಾಧಿಕಾರಿ ಶಿವಕುಮಾರ್, ಮಾಳೂರು ಠಾಣಾಧಿಕಾರಿ ಪ್ರವೀಣ್ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದು, ಏನೇನು ಸಾಕ್ಷ್ಯಾಧಾರಗಳು ಸಿಕ್ಕಿವೆ ಎನ್ನುವುದರ ಬಗ್ಗೆ ಇದುವರೆಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ.

error: Content is protected !!