ಸುದ್ದಿ ಕಣಜ.ಕಾಂ ಭದ್ರಾವತಿ
BHADRAVATHI: ಭದ್ರಾವತಿ ಪಟ್ಟಣದಲ್ಲಿ ಇತ್ತೀಚೆಗೆ ನಡೆದ ಗಲಾಟೆ ಪ್ರಕರಣ ಸಂಬಂಧ ಆರು ಜನರನ್ನು ಬಂಧಿಸಿ, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕಲ್ಲಿನಿಂದ ಹಲ್ಲೆ ನಡೆಸಿದ್ದು ಹಾಗೂ ಚಾಕುವಿನಿಂದ ಚುಚ್ಚಿದ್ದು ಸೇರಿ ಒಟ್ಟು ಮೂರು ಪ್ರಕರಣಗಳು ದಾಖಲಾಗಿದ್ದವು. ಪರಸ್ಪರ ಒಬ್ಬರಮೇಲೊಬ್ಬರು ಆರೋಪಿಸಿದ್ದರಿಂದ ಎರಡೂ ಗುಂಪಿನಲ್ಲಿದ್ದವರನ್ನು ಬಂಧಿಸಲಾಗಿದೆ.
READ | ಶಿವಮೊಗ್ಗದ 6 ಪೊಲೀಸ್ ಠಾಣೆಗಳ 82 ರೌಡಿಗಳಿಗೆ ಎಸ್ಪಿ ಕ್ಲಾಸ್, ಖಡಕ್ ವಾರ್ನಿಂಗ್
ಏನಿದು ಪ್ರಕರಣ?
ನವೆಂಬರ್ 13ರಂದು ಸಂಜೆ ಭದ್ರಾವತಿಯ ಜ್ಯೂನಿಯರ್ ಕಾಲೇಜು ಹತ್ತಿರ ಸಂಜೆ ಹೊತ್ತಿನಲ್ಲಿ ಜಹೀರ್, ಅಸ್ಲಂ ಹಾಗೂ ಹರೀಶ್, ಗೌತಮ್ ಅಲಿಯಾಸ್ ಅಪ್ಪು ಅವರುಗಳ ಮದ್ಯೆ ನಡೆದ ಗಲಾಟೆಯ ಹಿನ್ನೆಲೆಯಲ್ಲಿ ಜಹೀರ್ ಮತ್ತು ಹರೀಶ್ ನೀಡಿದ ದೂರಿನ ಮೇರೆಗೆ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳು ದಾಖಲಾಗಿದ್ದವು. ಆಸ್ಪತ್ರೆಗೆ ದಾಖಲಾಗಿದ್ದ ಜಹೀರ್ ನನ್ನು ನೋಡಲು ಹೋದಾಗ ಚಾಕುವಿನಿಂದ ಚುಚ್ಚಿ ರಕ್ತಗಾಯ ಪಡಿಸಿರುತ್ತಾರೆಂದು ರಿಜ್ವಾನ್ ನೀಡಿದ ದೂರಿನ ಮೇರೆಗೆ ಭದ್ರಾವತಿ ಹಳೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.
ಯರ್ಯಾರ ಬಂಧನ?
ಭದ್ರಾವತಿಯ ನೆಹರೂ ನಗರದ ನಿವಾಸಿಗಳಾದ ಹರೀಶ್(22), ಗೌತಮ್ ಅಲಿಯಾಸ್ ಅಪ್ಪು(22) ಎಂಬುವವರನ್ನು ಬಂಧಿಸಲಾಗಿದೆ.
ಇನ್ನೊಂದು ಪ್ರಕರಣದ ಆರೋಪಿತ ಸಿದ್ದಾಪುರ ಹೊಸೂರು ಗ್ರಾಮದ ಜಹೀರ್(27) ಮತ್ತು ಎಕಿನ್ಸಾ ಕಾಲೋನಿಯ ಅಸ್ಲಾಂ ಅಲಿಯಾಸ್ ಅಸ್ಲಿ(29) ಎಂಬುವವರನ್ನು ಬಂಧಿಸಲಾಗಿದೆ.
ಮೂರನೇ ಪ್ರಕರಣದಲ್ಲಿ ಹೊಸಮನೆಯ ಮಂಜುನಾಥ್(24), ಅಶೋಕ್(22) ಎಂಬುವವರನ್ನು ಬಂಧಿಸಲಾಗಿದೆ.