ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರಾಷ್ಟ್ರೀಯ ತನಿಖಾ ಸಂಸ್ಥೆ(National Investigation Agency-ಎನ್.ಐ.ಎ)ಯ ತಂಡವು ಶನಿವಾರ ಬೆಳಗ್ಗೆ ಶಿವಮೊಗ್ಗಕ್ಕೆ ಭೇಟಿ ನೀಡಿದೆ. ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣದ ಆರೋಪಿ ಶಾರೀಕ್ ತೀರ್ಥಹಳ್ಳಿ(Thirthahalli)ಯವನಾಗಿದ್ದು, ಶಾರೀಕ್ (Sharik) ಹಾಗೂ ಆತನ ಸಹಚರರ ಬಗ್ಗೆ ಮಾಹಿತಿ ಕಲೆ ಹಾಕುವುದಕ್ಕಾಗಿ ಅಧಿಕಾರಿಗಳು ಶಿವಮೊಗ್ಗ ಜಿಲ್ಲೆಗೆ ದಿಢೀರ್ ಭೇಟಿ ನೀಡಿದ್ದಾರೆ.
ಭೇಟಿಯ ಹಿಂದಿನ ಕಾರಣವೇನು?
ಈ ಹಿಂದೆ ಮೊಹಮ್ಮದ್ ಶಾರೀಕ್ ಸಹಚರರಾದ ಮಾಜ್ ಮುನೀರ್ ಅಹಮ್ಮದ್ ಮತ್ತು ಸೈಯದ್ ಯಾಸೀನ್ ಎಂಬುವವರನ್ನು ಶಿವಮೊಗ್ಗ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ತುಂಗಾನದಿಯ ತೀರದಲ್ಲಿ ಪ್ರಾಯೋಗಿಕ ಸ್ಫೋಟ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಆ ಬಗ್ಗೆ ಪರಿಶೀಲನೆ ನಡೆಸಲಾಗಿತ್ತು. ಪ್ರಸ್ತುತ ಮಂಗಳೂರಿನಲ್ಲಿ ನಡೆದ ಕುಕ್ಕರ್ ಸ್ಫೋಟಕ್ಕೂ ಶಿವಮೊಗ್ಗದ ತುಂಗಾ ನದಿ ತೀರದಲ್ಲಿ ನಡೆದ ಸ್ಫೋಟದ ಸಾಮ್ಯತೆಯ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ ನೀಡಿರುವುದಾಗಿ ಮಾಹಿತಿ ಲಭ್ಯವಾಗಿದೆ. ಅಧಿಕಾರಿಗಳಿಂದ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ತಿಳಿದುಬಂದಿದೆ.
https://suddikanaja.com/2022/09/21/police-invistigation-in-shimoga/