ಸುದ್ದಿ ಕಣಜ.ಕಾಂ ತೀರ್ಥಹಳ್ಳಿ
THIRTHAHALLI: ತಾಲೂಕಿನ ಹೆಗ್ಗೋಡು ಸಮೀಪದ ಕಮರಕೊಡಿಗೆ ಗ್ರಾಮದಲ್ಲಿ ಅಡಕೆ ಕೊನೆ ತೆಗೆಯುತ್ತಿದ್ದ ಕಾರ್ಮಿಕ ಮರದಿಂದ ಬಿದ್ದು ಮೃತಪಟ್ಟ ಘಟನೆ ಕಳೆದ ಮೂರು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
READ | ಶಿರಾಳಕೊಪ್ಪ ಗೋಡೆಬರಹ ಪ್ರಕರಣ, ಪೊಲೀಸರಿಂದ ಮಹತ್ವದ ವಿಡಿಯೋ ರಿಲೀಸ್
ಗಣಪತಿ(45) ಮೃತರು. ಇವರು ಲಘುಪಾನೀಯ ಘಟಕದಲ್ಲಿ ಕಾರ್ಮಿಕನಾಗಿದ್ದು, ಬಿಡುವಿನ ವೇಳೆಯಲ್ಲಿ ಕೊನೆ ತೆಗೆಯುತ್ತಿದ್ದರು ಎಂದು ತಿಳಿದುಬಂದಿದೆ.
ಅಡಿಕೆ ಕೊನೆ ತೆಗೆಯುವಾಗ ಆಯತಪ್ಪಿ ಬಿದ್ದಿದ್ದು ಮೃತಿಪಟ್ಟಿದ್ದಾರೆ. ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
https://suddikanaja.com/2022/12/05/case-filed-against-accused/