ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರಾಜ್ಯದಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ಹಲವು ಆಕಾಂಕ್ಷಿಗಳಿದ್ದಾರೆ. ಅವರು ಈಗಾಗಲೇ ಅಭ್ಯರ್ಥಿ ಸ್ಥಾನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಯಾರಿಗೆ ಟಿಕೆಟ್ ನೀಡಬೇಕೆನ್ನುವುದು ಪಕ್ಷವೇ ನಿರ್ಣಯಿಸಲಿದೆ. ಹೀಗಾಗಿ, ಯಾರೂ ಪಕ್ಷದ ಸಂಘಟನೆಗೆ ಧಕ್ಕೆ ಆಗುವಂತೆ ನಡೆದುಕೊಳ್ಳಬಾರದು ಎಂದು ಕೆಪಿಸಿಸಿ (KPCC) ಉಪಾಧ್ಯಕ್ಷ ಮಧು ಬಂಗಾರಪ್ಪ (Madhu Bangarappa) ಹೇಳಿದರು.
ಬಿಜೆಪಿ(BJP)ಯು ಭಾಷೆ ಮತ್ತು ಧರ್ಮದ ಆಧಾರದ ಮೇಲೆ ದೇಶ, ರಾಜ್ಯಗಳನ್ನು ಒಡೆಯುತ್ತಿದೆ. ಈಗ ರೈತರ ಸಮುದಾಯವನ್ನೂ ಒಡೆಯುವ ಪ್ರಯತ್ನದಲ್ಲಿದೆ. ಕರಾವಳಿಯಲ್ಲಿ ಭತ್ತ ಬೆಳೆಯುವ ರೈತರಿಗೆ ಸಹಾಯಧನ ನೀಡಿದ್ದು, ಭತ್ತ ಬೆಳೆಯುವ ಪ್ರದೇಶಗಳನ್ನು ನಿರ್ಲಕ್ಷಿಸಿದೆ. ಕೂಡಲೇ ಈ ಯೋಜನೆಯನ್ನು ರಾಜ್ಯದಾದ್ಯಂತ ವಿಸ್ತರಿಸಬೇಕು.
| ಮಧು ಬಂಗಾರಪ್ಪ, ಕೆಪಿಸಿಸಿ ಉಪಾಧ್ಯಕ್ಷ
ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಕೆಟ್ ಆಕಾಂಕ್ಷಿ(ticket aspirants)ಗಳು ಪಕ್ಷದ ಶಿಸ್ತಿಗೆ ಬದ್ಧವಾಗಿ ನಡೆದುಕೊಳ್ಳಬೇಕು. ಇಲ್ಲದಿದ್ದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಪಕ್ಷದ ಸಂಘಟನೆಗೆ ಧಕ್ಕೆ ತರಬಾರದು ಎಂದು ತಿಳಿಸಿದರು.
READ | ಶಿವಮೊಗ್ಗ ಸ್ಮಾರ್ಟ್ ಸಿಟಿಯಲ್ಲಿ ಉದ್ಯೋಗ ಅವಕಾಶ, ಯಾರೆಲ್ಲ ಅರ್ಹರು?
ಆಪರೇಷನ್ ಬಿಜೆಪಿಗೆ ಅಂಟಿರುವ ಕಾಯಿಲೆ
ಬಿಜೆಪಿ ಹಿಂಬಾಗಿಲು ರಾಜಕಾರಣ ಮಾಡುತ್ತಿದೆ. ಬಿಜೆಪಿಗೆ ‘ಆಪರೇಷನ್ ಕಮಲ'(Operation lotus)ವೆಂಬ ರೋಗವಾಗಿ ಬಿಟ್ಟಿದೆ. ಹೀಗಾಗಿ, ಬಹುಮತ ಬರದಿದ್ದರೂ ಹಣಬಲದ ಮೇಲೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಮಲೆನಾಡಿನ ಜನಾಕ್ರೋಶ ಪಾದಯಾತ್ರೆ ಮತ್ತು ಸಮಾವೇಶದಲ್ಲಿ ಸಾಕಷ್ಟು ಜನರು ಭಾಗವಹಿಸಿದ್ದರು. ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟರೂ ಪ್ರಯೋಜನವಾಗಿಲ್ಲ. ಮಲೆನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಸರ್ಕಾರ ಗಮನಹರಿಸುತ್ತಿಲ್ಲ ಎಂದು ಟೀಕಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್, ಮಾಜಿ ಎಂಎಲ್.ಸಿ ಆರ್.ಪ್ರಸನ್ನ ಕುಮಾರ್, ಪಾಲಿಕೆ ಸದಸ್ಯರಾದ ಎಚ್.ಸಿ.ಯೋಗೇಶ್, ರಮೇಶ್ ಹೆಗ್ಡೆ ಪಲ್ಷದ ಪ್ರಮುಖರು ಉಪಸ್ಥಿತರಿದ್ದರು.
https://suddikanaja.com/2022/12/08/tiles-siezed-by-tunga-nagar-police/