ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಅಧ್ಯಕ್ಷರಾಗಿರುವ ನ್ಯಾಷನಲ್ ಎಜುಕೇಷನ್ ಫೌಂಡೇಷನ್ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆಸಿರುವುದಕ್ಕೆ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ. ಚೇತನ್ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಬಿಜೆಪಿ ರಾಜಕೀಯ ಲಾಭಕ್ಕಾಗಿ ಸರ್ಕಾರದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಆ ಮೂಲಕ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
READ | ಅಡಿಕೆ ಬೆಲೆ 15-20 ಸಾವಿರ ಇಳಿಕೆಯಾಗಲು ಕೇಂದ್ರ ಸರ್ಕಾರವೇ ಕಾರಣ, ರಾಜ್ಯದ ಸಂಸದರಿಗೆ 3 ಸವಾಲು
ಡಿಕೆಶಿ ಪ್ರಾಬಲ್ಯ ಕುಗ್ಗಿಸುವ ಯತ್ನ
ಬಿಜೆಪಿ ಅಧಿಕಾರಕ್ಕಾಗಿ ಎಂತಹ ಹೀನಕೃತ್ಯಕ್ಕೂ ಇಳಿಯುತ್ತದೆ ಎನ್ನುವುದನ್ನು ಈಗಾಗಲೇ ‘ಆಪರೇಷನ್ ಕಮಲ’ದ ಹೆಸರಿನಲ್ಲಿ ಕಾಂಗ್ರೆಸ್-ಜೆಡಿಎಸ್ ಶಾಸಕರ ಖರೀದಿ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಅಣುಕಿಸುವ ಕೆಲಸ ಮಾಡಿದೆ. ಅಲ್ಲದೆ, ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರ ಪ್ರಾಬಲ್ಯ ಕುಗ್ಗಿಸುವ ಉದ್ದೇಶದಿಂದ ಪದೇ ಪದೆ ಅವರ ಮೇಲೆ ಸಿಬಿಐ, ಇಡಿ ಸಂಸ್ಥೆಗಳಿಂದ ದಾಳಿ ನಡೆಸಿದೆ. ಇಷ್ಟಾದರೂ ಡಿ.ಕೆ. ಶಿವಕುಮಾರ್ ಅವರ ಮೇಲಿನ ಆರೋಪಗಳನ್ನು ಸಾಬೀತು ಪಡಿಸಲು ಆಗಿಲ್ಲ ಎಂದು ತಿಳಿಸಿದ್ದಾರೆ.
ದ್ವೇಷ ರಾಜಕಾರಣ ಬಿಡಬೇಕು
ಡಿ.ಕೆ. ಶಿವಕುಮಾರ್ ಮತ್ತು ಅವರ ಕುಟುಂಬದವರು ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿ ಬಿಜೆಪಿ ಸರ್ಕಾರ ಎಷ್ಟೇ ಕಿರುಕುಳ ನೀಡುತ್ತಿದ್ದರೂ ಅವರು ಎದೆಗುಂದುತ್ತಿಲ್ಲ. ಕೂಡಲೇ ಬಿಜೆಪಿ ಈ ರೀತಿಯ ದ್ವೇಷದ ರಾಜಕಾರಣ ಬಿಡಬೇಕು. ಸ್ವಾಯತ್ತ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಬ್ಲ್ಯಾಕ್ ಮೇಲ್ ರಾಜಕಾರಣ ಮಾಡುವುದನ್ನು ನಿಲ್ಲಿಸಬೇಕು. ಇಲ್ಲವಾದರೆ ಯುವ ಕಾಂಗ್ರೆಸ್ ಬಿಜೆಪಿಗೆ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
https://suddikanaja.com/2022/12/08/madhu-bangarappa-spoke-on-congress-ticket-aspirants-at-shivamogga/